Advertisement

3 ದಿನಗಳಲ್ಲಿ ದೇವಸ್ಥಾನಗಳಲ್ಲಿ ಎಲ್ಲ ಸೇವೆಗೆ ಅವಕಾಶ: ಕೋಟ

03:00 AM Jul 20, 2021 | Team Udayavani |

ತೆಕ್ಕಟ್ಟೆ : ದೇವಸ್ಥಾನಗಳಲ್ಲಿ ಎಲ್ಲ ಸೇವೆಗಳು ಮತ್ತು ಅನ್ನಪ್ರಸಾದ ವಿತರಣೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಅನುಮತಿ ನೀಡಲಾಗು ವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಕೊರ್ಗಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ ಅವರು ಉದಯವಾಣಿ ಜತೆ ಮಾತನಾಡಿದರು.

Advertisement

ಧ್ವನಿ ಸುರುಳಿ ಬಗ್ಗೆ ಶಂಕೆೆ
ಬಿಜೆಪಿ ರಾಜಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಾಮಾನ್ಯ ಕಾರ್ಯ ಕರ್ತನಾಗಿ ಬಂದು ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದವರು. ನಿನ್ನೆ ವೈರಲ್‌ ಅಗಿರುವ ಆಡಿಯೋ ಬಗ್ಗೆ ಸಂಶಯ ಇದೆ. ಅದು ನಳಿನ್‌ ಧ್ವನಿಯಲ್ಲ. ತನಿಖೆ ನಡೆಸಿ ಅವರ ಹೆಸರಲ್ಲಿ ಕುಚೋದ್ಯದ ಕೆಲಸ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ವಿನಂತಿಸಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next