ಕೋಟ: ಹಲ್ಲೆ ನಡೆಸಿದಕ್ಕಾಗಿ ಪೊಲೀಸರು ಬಂಧಿಸಬಹುದೆಂದು ಹೆದರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೇಳೂರಿನಲ್ಲಿ ಫೆ. 2ರಂದು ಸಂಭವಿಸಿದೆ. ಸ್ಥಳೀಯ ನಿವಾಸಿ ಗುರುವ (63) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
Advertisement
ಈತ ತನ್ನ ಅಳಿಯ ರಘುರಾಮ ಅವರ ಮೇಲೆ ಹಲ್ಲೆ ಮಾಡಿ, ತಲೆಗೆ ಹೊಡೆದು ಗಾಯ ಮಾಡಿದ್ದು ರಘುರಾಮ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ತನ್ನ ಮೇಲೆ ಪೊಲೀಸ್ ಕೇಸ್ ಆಗುತ್ತದೆ, ಪೊಲೀಸರು ಬಂಧಿಸುತ್ತಾರೆ ಎನ್ನುವ ಭಯದಿಂದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.