Advertisement

ಕೋಟೆಪುರ-ಮಂಗಳೂರು ರಸ್ತೆಗೆ ಸೇತುವೆ: ಖಾದರ್‌ ಆಗ್ರಹ

11:50 PM Feb 20, 2023 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಕೋಟೆಪುರದಿಂದ ಮಂಗಳೂರು ನಗರವನ್ನು ಸಂಪರ್ಕಿಸುವ ರಸ್ತೆಗೆ ಸೇತುವೆ ನಿರ್ಮಿಸುವಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಉಪನಾಯಕ ಯು.ಟಿ. ಖಾದರ್‌ ಸರಕಾರವನ್ನು ಒತ್ತಾಯಿಸಿದ್ದಾರೆ.

Advertisement

ಪ್ರಶ್ನೋತ್ತರ ಕಲಾಪದಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಕಾಲಮಿತಿಯಲ್ಲಿ ಸೇತುವೆ ನಿರ್ಮಾಣ ಮಾಡುವುದಕ್ಕೆ ಸರಕಾರ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಹಿತದೃಷ್ಟಿಯಿಂದ ಈ ಕಾರ್ಯ ತುರ್ತಾಗಿ ನಡೆಯಬೇಕಿದೆ ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌, ಕೋಟೆಪುರ ಸಮೀಪ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಿರ್ಮಿಸುವ ಪ್ರಸ್ತಾವ ಈಗಾಗಲೇ ಇದೆ.

ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣ ಪ್ರಸ್ತಾವ ಇದೆ. ಆದರೆ ಹಣಕಾಸು ಇಲಾಖೆ ಹಳೆಯ ಕಾಮಗಾರಿ ಮುಕ್ತಾಯವಾಗುವರೆಗೆ ಯಾವುದೇ ಕೆಲಸ ಮಾಡದಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾವ ಕೈಬಿಡಲಾಗಿದೆ ಎಂದು ಉತ್ತರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next