Advertisement

ಕೊಟ್ಟಿಗೆಹಾರ:ಚರಂಡಿಗೆ ಉರುಳಿದ ಕಾರು; ನಾಲ್ವರು ಪಾರು

01:45 PM Mar 14, 2022 | Team Udayavani |

ಕೊಟ್ಟಿಗೆಹಾರ :ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಉರುಳಿ ನಾಲ್ವರಿಗೆ ಗಾಯಗಳಾದ ಘಟನೆ ಸೋಮವಾರ ನಡೆದಿದೆ.

Advertisement

ಶಿವಮೊಗ್ಗದಿಂದ ಉಜಿರೆಯ ಕಡೆ ತೆರಳುತ್ತಿದ್ದ ಕಾರು ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

ತುರ್ತು ನೆರವಾಗುವ ಚಾರ್ಮಾಡಿ ಹಸನಬ್ಬ ಅವರ ತಂಡ ಹಾಗೂ ಸ್ಥಳೀಯರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next