Advertisement

ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರ ದಂಡು

03:25 PM Jun 08, 2020 | Naveen |

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್‌, ದೇವರಮನೆ, ರಾಣಿಝರಿ ಮುಂತಾದ ಪ್ರದೇಶಗಳಿಗೆ ಪ್ರವಾಸಿಗರು ಹರಿದುಬರುತ್ತಿದ್ದು, ಕೋವಿಡ್ ಹರಡದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸದಿರುವುದು ಅಪಾಯವನ್ನು ಆಹ್ವಾನಿಸುವಂತಿದೆ.

Advertisement

ಭಾನುವಾರ ದೇವರಮನೆ, ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರು ಗುಂಪು ಗುಂಪಾಗಿ ಸೇರಿ ಫೋಟೋ ತೆಗೆದುಕೊಳ್ಳುವುದು ಕಂಡು ಬಂದರೆ, ಕೆಲ ಪ್ರವಾಸಿಗರು ಮಾಸ್ಕ್ ಧರಿಸದೇ ವಾಹನದಲ್ಲಿ ಜೋರಾಗಿ ಹಾಡು ಹಾಕಿಕೊಂಡು ನೃತ್ಯ ಮಾಡುತ್ತಿದ್ದುದು ಕಂಡು ಬಂದಿತು. ದಕ್ಷಿಣ ಕನ್ನಡ, ಹಾಸನ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ ಪ್ರವಾಸಿಗರು ಬರುತ್ತಿದ್ದು, ಸಾಮಾಜಿಕ ಅಂತರ ಅನುಸರಿಸದೇ ಇರುವುದು ಅಪಾಯವನ್ನು ಆಹ್ವಾನಿಸವಂತಿದೆ. ಚಾರ್ಮಾಡಿ ಘಾಟ್‌ನಲ್ಲಿ ಸೆಲ್ಫಿ, ಫೋಟೋ ತೆಗೆಯಬಾರದು ಎಂದು ಸೂಚನಾಫಲಕ ಅಳವಡಿಸಿದ್ದರೂ ಫೋಟೋ ತೆಗೆಯುತ್ತಿರುವುದು ಕಂಡು ಬರುತ್ತಿದೆ.

ಕೆಲ ಪ್ರವಾಸಿಗರು ದೇವರಮನೆ, ಚಾರ್ಮಾಡಿ ಘಾಟ್‌ಗೆ ಬೈಕ್‌ನಲ್ಲಿ ಗುಂಪು ಗುಂಪಾಗಿ ಬಂದು ಮದ್ಯ ಸೇವನೆ ಮಾಡಿ ಮೋಜು-ಮಸ್ತಿಯಲ್ಲಿ ತೊಡಗುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿದ ಸ್ಥಳೀಯರಾದ ಶ್ರೇಯಸ್‌ ಬಿ. ಹೊಸಳ್ಳಿ, ದೇವರಮನೆ, ಚಾರ್ಮಾಡಿ ಘಾಟ್‌ ಗೆ ಹೊರ ಜಿಲ್ಲೆಗಳಿಂದ ಪ್ರವಾಸಿಗರು ಬರುತ್ತಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ. ಅಲ್ಲದೇ, ಮಾಸ್ಕ್ ಧರಿಸದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ, ಪ್ರವಾಸಿಗರು ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next