Advertisement

ಲಕ್ಷಾಂತರ ಮೌಲ್ಯದ ಮರ ಪತ್ತೆ : ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಪ್ರಕರಣ ಬೆಳಕಿಗೆ

07:20 PM Dec 01, 2021 | Team Udayavani |

ಕೊಟ್ಟಿಗೆಹಾರ: ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಬೆಲೆಬಾಳುವ ಮರ ಪತ್ತೆಯಾದ ಘಟನೆ ಬಿದಿರುತಳದಲ್ಲಿ ನಡೆದಿದೆ.

Advertisement

ಬಾಳೂರು ಗ್ರಾಮದ ನಾಗೇಶ್ ಆಚಾರ್ ಎಂಬುವವರು ಬಿದಿರುತಳ ಗ್ರಾಮದಿಂದ ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದು ಬಿದಿರುತಳಕ್ಕೆ ಅರಣ್ಯ ಅಧಿಕಾರಿಗಳು ಹುಡುಕಲು ಹೋದ ಸಂದರ್ಭದಲ್ಲಿ ಬಿದಿರುತಳದ ಕೃಷ್ಣೆಗೌಡ ಅವರಿಗೆ ಸೇರಿದ ಮನೆಯಲ್ಲಿ ಮರವನ್ನು ಅಡಗಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕೃಷ್ಣೆಗೌಡ ಅವರ ಮೇಲೆ ಅವರ ಮೇಲೆ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಬಸವರಾಜ್, ಅರಣ್ಯ ರಕ್ಷಕ ಪರಮೇಶ್ ಇದ್ದರು.

ಲಕ್ಷಾಂತರ ರೂ ಬೆಲೆಬಾಳುವ ಮರಗಳ ಸಂಗ್ರಹ ಮಾಡಿದ್ದರೂ ಕೂಡ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳ ಗಮನಕ್ಕೆ ಬಾರದೇ ಇರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿಯನ್ನು ವಿರೋಧಿಸುವವರು ಒಂದಾಗಬೇಕು: ಮಮತಾ ಭೇಟಿ ಬಳಿಕ ಪವಾರ್

Advertisement

Udayavani is now on Telegram. Click here to join our channel and stay updated with the latest news.

Next