Advertisement

Kottigehara: ಕಾರಿನಲ್ಲಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ…

03:26 PM Jan 06, 2024 | Team Udayavani |

ಕೊಟ್ಟಿಗೆಹಾರ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾ ರೆ.

Advertisement

ಬೇಲೂರಿನಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇದ್ರಿಸ್ ಪಾಷಾ ಪಾಕೇಟ್ ಎಂಬುವನನ್ನು ಪಿ.ಎಸ್.ಐ. ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತನಿಂದ 1.550 ಗ್ರಾಂ. ಗಾಂಜಾ ಮತ್ತು ಒಂದು ಮಾರುತಿ ಕಾರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಜಿಲ್ಲಾ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಚರಣೆಯಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣಾ ಪಿಎಸ್ಐ ವಿಶ್ವನಾಥ್ ಹಾಗೂ ಸಿಬ್ಬಂದಿಗಳಾದ ಇಮ್ರಾನ್ ಖಾನ್, ಹರೀಶ್ , ರಮೇಶ್ , ಮಹೇಂದ್ರ , ಮಂಜುನಾಥ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: Madhya Pradesh: ಬಾಲಕಿಯರ ಹಾಸ್ಟೆಲ್‌ ನಿಂದ 26 ಬಾಲಕಿಯರು ನಾಪತ್ತೆ; ಪ್ರಕರಣ ದಾಖಲು

Advertisement
Advertisement

Udayavani is now on Telegram. Click here to join our channel and stay updated with the latest news.

Next