Advertisement

ಸುಗ್ರೀವಾಜ್ಞೆ ಹಿಂಪಡೆಯಲು ಆಗ್ರಹ

06:42 PM Jul 02, 2020 | Naveen |

ಕೊಟ್ಟಿಗೆಹಾರ: ರಾಜ್ಯದ ರೈತ ಕಾರ್ಮಿಕರಿಗೆ ಮಾರಕವಾದ ಬಂಡವಾಳಶಾಹಿಗಳ ಪರವಾಗಿರುವ ಕರ್ನಾಟಕ ಭೂ ಸುಧಾರಣಾ ಕಾಯಿದೆ ತಿದ್ದುಪಡಿ, ಎಪಿಎಂಸಿ ಕಾಯಿದೆ ತಿದ್ದುಪಡಿ, ಕಾರ್ಮಿಕ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಬಣಕಲ್‌ ಗ್ರಾಪಂ ಮೂಳಕ ಸಿಎಂಗೆ ಮನವಿ ಸಲ್ಲಿಸಲಾಯಿತು.

Advertisement

ರೈತ ಸಂಘದ ರಾಜ್ಯ ಮಹಿಳಾ ಉಪಾದ್ಯಕ್ಷೆ ವನಶ್ರೀ ಲಕ್ಷ್ಮಣಗೌಡ ಮಾತನಾಡಿ, ಸರ್ಕಾರ ಅನ್ನದಾತರನ್ನು, ಕಾರ್ಮಿಕರನ್ನು, ದುಡಿಯುವ ಜನರನ್ನು ವಂಚಿಸಿ ಬಂಡವಾಳಶಾಹಿಗಳಿಗೆ ಮಣೆ ಹಾಕುವ ಕಾಯಿದೆಗಳಿಗೆ ತಂದಿರುವ ತಿದ್ದುಪಡಿ ಸುಗ್ರಿವಾಜ್ಞೆ ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಸಮಿತಿ ರಾಜ್ಯ ಸಂಚಾಲಕ ಗೌಸ್‌ ಮೊಹಿದ್ದೀನ್‌ ಮಾತನಾಡಿದರು. ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥಗೌಡ, ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿಗೌಡ, ಮಹಿಳಾ ತಾಲೂಕು ಉಪಾಧ್ಯಕ್ಷೆ ಶಕುಂತಲಾ ಜಗದೀಶ್‌, ಕಾರ್ಯದರ್ಶಿ ನಾಗೇಶ್‌ಗೌಡ, ಪ್ರಜ್ವಲ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next