Advertisement

Kottigehara: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು

03:03 PM Oct 02, 2024 | Team Udayavani |

ಕೊಟ್ಟಿಗೆಹಾರ: ಗಾಂಧಿ ಜಯಂತಿ (ಆ.2) ದಿನದಂದು ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಮಾಂಸದ ಅಂಗಡಿಗಳು ತೆರೆದಿವೆ.

Advertisement

ಅಹಿಂಸಾ ತತ್ವವನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು ದೇಶದ ಪಿತಾಮಹ ಸ್ಥಾನದಲ್ಲಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾಂಸದ ಅಂಗಡಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಿ ನಿಯಮವನ್ನು ಗಾಳಿಗೆ ತೂರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ವರ್ಷ ಗಾಂಧಿ ಜಯಂತಿಯಂದು ಬಾರ್ ಗಳು, ಮಾಂಸದ ಅಂಗಡಿಗಳು ಬಂದ್ ಆಗಲು ಸರ್ಕಾರ ಆದೇಶಿಸುತ್ತದೆ. ಆದರೆ ಈ ಬಾರಿ ಹಬ್ಬದ ನೆಪದಲ್ಲಿ ಮಾಂಸದ ಅಂಗಡಿಗಳು ತೆರೆದಿವೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next