Advertisement

Kottigehara; ಅಪರಿಚಿತ ಜಿಪ್ಸಿ ಢಿಕ್ಕಿ:ವ್ಯಕ್ತಿಗೆ ಗಂಭೀರ ಗಾಯ

09:48 PM Sep 30, 2023 | Team Udayavani |

ಕೊಟ್ಟಿಗೆಹಾರ: ಬಣಕಲ್ ಪೇಟೆಯಲ್ಲಿ ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆಗೆ ಸಾಗುತ್ತಿದ್ದ ಅಪರಿಚಿತ ಜಿಪ್ಸಿ ವಾಹನ ವ್ಯಕ್ತಿಗೆ ಢಿಕ್ಕಿ ಹೊಡೆದು ವಾಹನ ನಿಲ್ಲಿಸದೇ ಹೋಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ವಿನಯ್ ಎಂಬ ಯುವಕ ಗಾಯಾಳು.

Advertisement

ಬಣಕಲ್ ಸಮೀಪದ ಮತ್ತಿಕಟ್ಟೆಯಿಂದ ಬಿ.ಎಸ್ ರಕ್ಷಿತ್ ಅವರ ಬೈಕ್ನಲ್ಲಿ ವಿನಯ್ ಸೇರಿ ಅಂಗಡಿ ದಿನಸಿ ತರಲು ಬಣಕಲ್ ಗೆ ಬಂದಿದ್ದರು.ಬೈಕನ್ನು ಆಲಂ ಸೂಪರ್ ಮಾರ್ಕೆಟ್ ಬಳಿ ನಿಲ್ಲಿಸಿ ಇತರ ವಸ್ತುಗಳನ್ನು ಖರೀದಿಸಲು ರಾತ್ರಿ 8ಗಂಟೆ ಸಮಯದಲ್ಲಿ ವಿನಯ್ ರಸ್ತೆ ದಾಟುತ್ತಿದ್ದಾಗ ಮೂಡಿಗೆರೆ ಕಡೆಯಿಂದ ಕೊಟ್ಟಿಗೆಹಾರ ಕಡೆ ಸಾಗುವ ವಾಹನವು ಚಾಲಕನ ಅತಿಯಾದ ವೇಗದಿಂದ ವಿನಯ್ ಗೆ ಢಿಕ್ಕಿ ಹೊಡೆದಿದೆ.ವಿನಯ್ ಗಂಭೀರ ಗಾಯಗೊಂಡು ತಲೆಗೆ, ಕಾಲಿಗೆ ಪೆಟ್ಟಾಗಿತ್ತು.ಆದರೆ ಅಪರಿಚಿತ ಜಿಪ್ಸಿ ವಾಹನ ನಿಲ್ಲಿಸದೇ ಕೊಟ್ಟಿಗೆಹಾರ ಕಡೆಗೆ ಸಾಗಿತ್ತು.ಕೂಡಲೆ ಸ್ಥಳೀಯ ಯುವಕರು ನಮ್ಮ ಊರು ಬಣಕಲ್ ವ್ಯಾಟ್ಸಾಪ್ ಗ್ರೂಪಿನಲ್ಲಿ ಒಬ್ಬರಿಂದೊಬ್ಬರಿಗೆ ಜಿಪ್ಸಿ ಹಿಡಿಯುವಂತೆ ಬಾಳೂರು ಪೊಲೀಸ್ ಠಾಣೆ ಸುತ್ತಮುತ್ತ ಮಾಹಿತಿ ತಲುಪಿಸಿದ್ದಾರೆ.

ಬಾಳೂರು ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ವಾಹನ ನಿಲ್ಲಿಸಲು ಹೇಳಿದರೆ ಚಾಲಕ ಬ್ಯಾರಿಕೇಡ್ ಗೆ ಗುದ್ದಿ ಎಲ್ಲಿಯೂ ನಿಲ್ಲಿಸದೇ ಗಬ್ಗಲ್ ಮೂಲಕ ನಾಪತ್ತೆಯಾಯಿತು.ಕೆಲವು ಯುವಕರು ರಾತ್ರಿವರೆಗೂ ಬೆನ್ನಟ್ಟಿದರೂ ಇವರ ಸುಳಿವು ಸಿಗಲಿಲ್ಲ.ಬಾಳೂರು ಠಾಣೆಯ ಪೊಲೀಸರು ಹಿರೇಬೈಲ್, ಬಿಳಗಲಿ ಬಳಿ ಜಿಪ್ಸಿ ವಾಹನವನ್ನು ಹಿಡಿದು ಪೊಲೀಸ್ ಠಾಣೆಗೆ ತಂದರು.ಘಟನೆ ಬಣಕಲ್ ನಲ್ಲಿ ಆದುದರಿಂದ ಜಿಪ್ಸಿ ವಾಹನವನ್ನು ಬಣಕಲ್ ಗೆ ತಂದು ಪ್ರಕರಣ ದಾಖಲಿಸಲಾಯಿತು.ಗಾಯಾಳು ವಿನಯ್ ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next