Advertisement

ಕಾರಿನಲ್ಲಿ ಹೋಗುತಿದ್ದವರನ್ನು ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

09:42 AM Aug 11, 2022 | Team Udayavani |

ಕೊಟ್ಟಿಗೆಹಾರ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ ಮುಂದುವರೆದಿದ್ದು ಕಾರಿನಲ್ಲಿ ಹೋಗುತಿದ್ದವರನ್ನು ಕಾಡಾನೆಯೊಂದು ಅಟ್ಟಾಡಿಸಿಕೊಂಡು ಹೋದ ಘಟನೆ ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ನಡೆದಿದೆ.

Advertisement

ಜಿಲ್ಲೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು ಕಾಫಿ, ಅಡಿಕೆ ಕೃಷಿ ತೋಟಗಳನ್ನು ಪುಡಿಗಟ್ಟಿವೆ ಅಲ್ಲದೆ ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ಕಾಡಾನೆಯೊಂದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರನ್ನು ಬೆನ್ನಟ್ಟಿದೆ ಈ ವೇಳೆ ಕಾರು ಚಾಲಕ ಪ್ರಾಣಾಪಾಯದಿಂದ ಕಾರು ಚಲಾಯಿಸಿ ರಕ್ಷಣೆಗೆ ಮುಂದಾಗಿದ್ದಾನೆ ಆದರೆ ಚಾಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ನುಗ್ಗಿದೆ ಕಾರಿನಲ್ಲಿದ್ದ ಚಾಲಕ ಸೇರಿ ಒಟ್ಟು ಮೂವರು ಅಲ್ಲಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ.

ಕಾಡಾನೆಗಳ ಹಿಂಡು ಪ್ರತ್ಯಕ್ಷ
ಮೂಡಿಗೆರೆ ತಾಲೂಕಿನ ಹಾಂದಿ, ವಿಜಯನಗರ, ಹೊಸಪೇಟೆ ಸುತ್ತಮುತ್ತ ಗುರುವಾರ ಮುಂಜಾನೆ 13 ಕಾಡಾನೆ ಲಗ್ಗೆ ಇಟ್ಟಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಕಾಫಿ, ಅಡಿಕೆ ತೋಟಗಳಿಗೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಕೃಷಿ, ಬೆಳೆ ನಾಶ ಮಾಡಿದೆ.

ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಕಳೆದ ಹಲವು ದಿನಗಳಿಂದ ಕಾಡಾನೆಗಳು ದಾಳಿ ನಡೆಸುತ್ತಿದ್ದು ಆನೆಗಳ ದಾಳಿ ತಡೆಗೆ ಅರಣ್ಯ ಇಲಾಖೆ ಯಾವುದೇ ಕ್ರಮಕೈಗೊಳ್ಳದಿರುವುದರಿಂದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next