Advertisement

ಕೊಟ್ಟೂರೇಶ್ವರ ಕಾರ್ತಿಕೋತ್ಸವ

04:04 PM Dec 31, 2020 | Team Udayavani |

ಕೊಟ್ಟೂರು: ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಕಾರ್ತಿಕೋತ್ಸವ ಸರಳವಾಗಿ ಆಚರಿಸಲಾಯಿತು. ಮಹಲ್‌ ಮಠದ ಕ್ರಿಯಾಮೂರ್ತಿಗಳಾದ ಶಂಕರಮೂರ್ತಿ ಸ್ವಾಮೀಜಿ ಹಾಗೂ ಕೊಟ್ಟೂರು ದೇವರು ಶಿವಪ್ರಕಾಶ ಸ್ವಾಮೀಜಿ ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು.

Advertisement

ನಂತರ ಭಕ್ತರು ದೇವಸ್ಥಾನದ ಆವರಣದಲ್ಲಿ ಮಣ್ಣಿನ ಹಣತೆ ಹಚ್ಚಿ ಭಕ್ತಿ ಸಮರ್ಪಿಸಿದರು. ಪಟ್ಟಣದ ಹಿರೇಮಠ, ಗಚ್ಚಿನಮಠ, ತೊಟ್ಟಿಲು ಮಠ, ಮೂರ್ಕಲ್ಲು ಮಠ, ಮರಿ ಕೊಟ್ರೇಶ್ವರ ದೇವಸ್ಥಾನಗಳಲ್ಲಿ ಶ್ರೀ ಸ್ವಾಮಿಯ ಪವಿತ್ರ ದೀಪಗಳು ಬೆಳಗಿದವು.

ಇದನ್ನೂ ಓದಿ:ಹೊಸ ವರ್ಷಾಚರಣೆ: ಶೇ.50ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ

ಭಕ್ತರು ದೇವಸ್ಥಾನದ ಮಠದ ಮುಂಭಾಗದಲ್ಲಿ ಕೊಬ್ಬರಿಯನ್ನು ಉರಿಸಿ ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಪ್ರಧಾನ ಧರ್ಮಕರ್ತರಾದ ಸಿ.ಎಚ್‌. ಎಂ. ಗಂಗಾಧರ, ಕಾರ್ಯನಿರ್ವಾಹಕಮ ಅಧಿಕಾರಿ ಗಂಗಪ್ಪ, ಪ್ರಧಾನ ಅರ್ಚಕ ಸಿ.ಎಚ್‌.ಎಂ. ನಾಗರಾಜ ಊರಿನ ಮುಖಂಡರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next