Advertisement

Kotturu: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಶಾಂತಿ ಸಭೆ

07:20 PM Sep 10, 2023 | Team Udayavani |

ಕೊಟ್ಟೂರು: ಪಟ್ಟಣದ ಹರಪನಹಳ್ಳಿ ರಸ್ತೆ ಯಲ್ಲಿರುವ ಪೊಲೀಸ್ ಠಾಣೆಯಲ್ಲಿ ಆವರಣದಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾನುವಾರ ಶಾಂತಿ ಸಭೆ ನೆಡೆಸಿದರು.

Advertisement

ಸಭೆಯಲ್ಲಿ ಮಾತನಾಡಿದ ಪಟ್ಟಣದ ಪ್ರಮುಖ ಮುಖಂಡರು ಹಾಗೂ ಸಂಘ ಸಂಸ್ಥೆಯ ಪ್ರತಿನಿಧಿಗಳು, ಕಾನೂನಿನ ಅಡಿಯಲ್ಲಿ ನಾವುಗಳು ಒಗ್ಗಟಾಗಿ ಸೇರಿಕೊಂಡು ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಯುತವಾಗಿ ಆಚರಣೆ ಮಾಡಿಕೊಂಡು ಯಾವುದೇ ರೀತಿಯ ಅಹಿತಕರ ಘಟನೆಗಳು ನೆಡೆಯದಂತೆ ಹಬ್ಬವನ್ನು ಆಚರಣೆ ಮಾಡುತ್ತೇವೆ ಎಂದರು.

ಗಣೇಶ ಮೂರ್ತಿಗಳ ವಿಸರ್ಜನೆಗೆ ಸಣ್ಣ ಪುಟ್ಟ ಮಕ್ಕಳು ಮೆರವಣಿಗೆ ಹೋಗದಂತೆ ಪೋಷಕರು ಗಮನಹರಿಸಿ ಹಾಗೂ ಮೂರ್ತಿಗಳ ವಿಸರ್ಜನೆ ನಮ್ಮ ಇಲಾಖೆ ಬೇಕಾದ ಅಗತ್ಯ ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಿದ್ದು, ಯಾರೂ ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು ಖರೀದಿಸದೇ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ತ್ಯಾಜ್ಯವನ್ನು ಒಂದು ನಿಗದಿಪಡಿಸಿದ ಸ್ಥಳದಲ್ಲಿ ಹಾಕಬೇಕು’ ಎಂದು ಸಲಹೆ ನೀಡಿದರು.

ಕೆಲವು ಪೆಟ್ಟಿ ಶಾಪ್ ಗಳು, ಡಾಬಾ, ಹೋಟೆಲ್‍ಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತದೆ ಎಂಬ ದೂರುಗಳಿದ್ದು ಅಬಕಾರಿ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ. ಹಬ್ಬದ ವೇಳೆ ಬಂಟಿಂಗ್ಸ್, ಪ್ಲೆಕ್ಸ್ ಅಳವಡಿಸಲು ನಿಗದಿತ ಸ್ಥಳಗಳಲ್ಲಿ ಮಾತ್ರ ಅನುಮತಿ ಪಡೆದು ಅಳವಡಿಸಬೇಕೆಂದು ಸೂಚಿಸಲಾಗಿದೆ.

ಸಿಪಿಐ ವೆಂಕಟಸ್ವಾಮಿ ಮಾತನಾಡಿ, ಪ್ರತಿ ಒಂದು ಗಣೇಶ ಮೂರ್ತಿ ಇರುವ ಸ್ಥಳ ದಲ್ಲಿ ಯಾವುದೇ ಕಾರಣಕ್ಕೂ ಡಿಜೆ ಬಳಸುವಂತಿಲ್ಲ ಹಾಗೂ ಅಕ್ರಮ ಚಟುವಟಿಕೆ ನೆಡೆದರೆ ಅಂಥವರ ವಿರುದ್ಧ ಪ್ರಕರಣ ದಾಖಲು ಮಾಡುತ್ತೇವೆ.ಯುವಕರು ಗಣೇಶ ಚತುರ್ಥಿಯನ್ನು ಶಾಂತಿಯುತವಾಗಿ ಆಚರಿಸಬೇಕು. ಗಣೇಶ ವಿಸರ್ಜನೆ ವೇಳೆ ಡಿಜೆ ಬಳಸುವುದನ್ನು ನಿಷೇಧಿಸಲಾಗಿದೆ. ಸಾಂಪ್ರದಾಯಿಕ ಮಜಲುಗಳ ಮೂಲಕ ವಿಸರ್ಜನೆ ಮಾಡಬೇಕು ಎಂದರು.

Advertisement

ಪಿ. ಎಸ್ .ಐ.ಶಶಿಕಲಾ ಶಿಂದೆ ಮಾತನಾಡಿ, ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಅಹಿತಕರ ಘಟನೆಗಳು ನಡೆಯದಂತೆ ಜಾಗೃತಿ ವಹಿಸಬೇಕು. ಎಲ್ಲರೂ ಕೆಇಬಿ, ಅಗ್ನಿಶಾಮಕ, ಪಪಂ ಹಾಗೂ ಪೊಲೀಸ್ ಇಲಾಖೆಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪರವಾನಿಗೆ ಪಡೆಯಬೇಕು ಎಂದು ತಿಳಿಸಿದರು.

ರಾಜ್ಯ ರೈತ ಸಂಘದ ಉಪಾಧ್ಯಕ್ಷ ಭರಮಣ್ಣ, ವಕೀಲರಾದ ಟಿ. ಹನುಮಂತಪ್ಪ,ಪ ಪಂ.ತೋಟದ ರಾಮಣ್ಣ,ಬದ್ದಿ ಮರಿಸ್ವಾಮಿ,ಬದ್ದಿ ದುರುಗೇಶ, ಶಿವಕುಮಾರ್,ಇಲಾಖೆ ಅಧಿಕಾರಿ ಎಎಸ್ಐ ಅಬ್ಬಾಸ್, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next