Advertisement

ಸ್ವಾತಂತ್ರ್ಯೋತ್ಸವ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ

03:45 PM Jul 26, 2019 | Naveen |

ಕೊಟ್ಟೂರು: ತಾಲೂಕು ಆಡಳಿತದಿಂದ ಆ. 15 ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿ ಮತ್ತು ವೈಭವದಿಂದ ಆಚರಿಸಲು ಸಿದ್ಧತೆ ನಡೆದಿದೆ ಎಂದು ತಹಶೀಲ್ದಾರ ಜಿ.ಅನಿಲ್ ಕುಮಾರ ತಿಳಿಸಿದರು.

Advertisement

ಕೊಟ್ಟೂರಿನ ಪ್ರವಾಸಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಆಡಳಿತದಿಂದ ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಆ. 15ರ ಬೆಳಗ್ಗೆ 8:30ಕ್ಕೆ ಧ್ವಜಾರೋಹಣ ನಡೆಯಲಿದೆ. ಶಾಸಕ ಎಸ್‌. ಭೀಮಾನಾಯ್ಕ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಪ್ರತಿಯೊಂದು ಶಾಲಾ ಮಕ್ಕಳಿಗೆ ಶಾಸಕ ಎಸ್‌. ಭೀಮಾನಾಯ್ಕರು ಸಿಹಿಯನ್ನು ಕಳುಹಿಸಲಿದ್ದು ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಎಲ್ಲಾ ಮಕ್ಕಳಿಗೂ ಮತ್ತು ಶಿಕ್ಷಕರಿಗೆ ಬೆಳಗಿನ ಉಪಾಹಾರ ವ್ಯವಸ್ಥೆ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಬಗೆ ಉಪಸಮಿತಿಗಳನ್ನು ರಚಿಸಲಾಗುವುದು. ಫೆರೆಡ್‌ ಮತ್ತು ಕವಾಯಿತು ಪ್ರದರ್ಶನವನ್ನು ಪೊಲೀಸ್‌ ಮತ್ತು ಶಿಕ್ಷಣ ಇಲಾಖೆಯವರು ಸಹಯೋಗದೊಂದಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆಯವರು ನಿರ್ವಹಿಸುತ್ತಾರೆ.

ಸ್ವಾತಂತ್ರ ಹೋರಾಟಗಾರರ ಕುಟುಂಬದವರು ಮತ್ತು ಇತರ ಸಾಧಕರನ್ನು ಸನ್ಮಾನಿಸಿ ಅಭಿನಂದಿಸಲು ಉಪಸಮಿತಿ ಶಿಫಾರಸ್ಸು ಪಡೆಯಲಾಗುವುದು. ರಸಪ್ರಶ್ನೆ, ಪರಿಸರ ಮತ್ತು ಭಾಷಣ ಸ್ಪರ್ಧೆಗಳನ್ನು ಪ್ರಾಥಮಿಕ ಪ್ರೌಢಶಾಲಾ ಮತ್ತು ಕಾಲೇಜು ಹಂತಗಳಲ್ಲಿ ನಡೆಸಿ ಅದರಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಗುವುದು. ಸಮಾರಂಭದ ವೇದಿಕೆ ನಿರ್ಮಾಣ ಮತ್ತು ಸ್ವಚ್ಛತಾ ಕಾರ್ಯವನ್ನು ಪಟ್ಟಣ ಪಂಚಾಯಿತಿ ಆಡಳಿತ ನಿರ್ವಹಿಸಲಿದೆ ಎಂದು ಹೇಳಿದರು.

Advertisement

ಜಿಪಂ ಸದಸ್ಯ ಎಂ.ಎಂ. ಜೆ ಹರ್ಷವರ್ಧನ ಮಾತನಾಡಿ, ಕಾರ್ಯಕ್ರಮದ ಯಶಸ್ವಿಗೆ ಹಣಕಾಸಿನ ನೆರವು ಅಗತ್ಯವಿದ್ದು ಅದಕ್ಕಾಗಿ ಸ್ವಂತವಾಗಿ 10 ಸಾವಿರರೂಗಳನ್ನು ತಾಲೂಕು ಆಡಳಿತಕ್ಕೆ ನೀಡಲಾಗುವುದು ಎಂದರು. ಹಗರಿಬೊಮ್ಮನಹಳ್ಳಿ ತಾಪಂ ಉಪಾಧ್ಯಕ್ಷ ಕೊಚಾಲಿ ಸುಶೀಲಮ್ಮ ಮಂಜುನಾಥ ಮಾತನಾಡಿ, ಸಮಾರಂಭದಲ್ಲಿ ಮಾಜಿ ಯೋಧರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರನ್ನು ಮತ್ತು ಇತರ ಗಣ್ಯರನ್ನು ಸನ್ಮಾನಿಸುವ ವೆಚ್ಚವನ್ನು ತಾವು ಭರಿಸುವುದಾಗಿ ಹೇಳಿದರು.

ತಾಪಂ ಸದಸ್ಯರಾದ ಬೋರವೆಲ್ ತಿಪ್ಪೇಸ್ವಾಮಿ, ಭರಮಣ್ಣ, ಸಿದ್ದಯ್ಯ, ವಿನಯ್‌, ವೀಣಾ ವಿವೇಕಾನಂದಗೌಡ, ತೋಟದ ರಾಮಣ್ಣ, ಕೆಂಗರಾಜ್‌, ರಾಜೇಶ ಮಾತನಾಡಿ, ಸಮಾರಂಭದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸುವ ವೆಚ್ಚವನ್ನು ಭರಿಸುವುದಾಗಿ ಪ್ರಕಟಿಸಿದರು.

ಪಪಂ ಮುಖ್ಯಾಧಿಕಾರಿ ಎಚ್.ಎಫ್‌. ಬಿದರಿ, ಖಜಾನೆ ಅಧಿಕಾರಿ ಶಕುಂತಲಮ್ಮ, ಎಸ್‌ಎಸ್‌ಐ ಗುರುಸ್ವಾಮಿ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಸಿ.ಅಜ್ಜಪ್ಪ, ಕೊಟ್ರೇಶ, ತಾಪಂ ಸದಸ್ಯ ಗುರುಮೂರ್ತಿ ಶ್ಯಾನುಬೋಗರ್‌, ಎಪಿಎಂಸಿ ಅಧ್ಯಕ್ಷ ಬೂದಿ ಶಿವಕುಮಾರ, ಪಿ. ಸುಧಾಕರಗೌಡ ಇದ್ದರು. ಕಂದಾಯ ಇಲಾಖೆಯ ಎಸ್‌.ವಿ. ಬಸವರಾಜ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next