Advertisement

ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಮರ್ಡರ್ ಕೇಸ್ ಗೆ ಮರುಜೀವ?

01:36 PM Mar 30, 2017 | Sharanya Alva |

ಬೆಂಗಳೂರು: ಬೆಂಗಳೂರು ಭೂಗತ ಲೋಕವನ್ನೇ ಬೆಚ್ಚಿಬೀಳಿಸಿದ್ದ ರೌಡಿ ಕೊತ್ವಾಲ್ ರಾಮಚಂದ್ರ ಕೊಲೆ ಪ್ರಕರಣಕ್ಕೆ ಮರುಜೀವ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಖಾಸಗಿ ಟಿವಿ ಚಾನೆಲ್ ಗಳ ವರದಿ ತಿಳಿಸಿದೆ.

Advertisement

1986ರಲ್ಲಿ ಕೊತ್ವಾಲ್ ರಾಮಚಂದ್ರನನ್ನು ತುಮಕೂರಿನಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಈ ಪ್ರಕರಣದಲ್ಲಿ ಅಂದು ಅಗ್ನಿ ಶ್ರೀಧರ್ ಸೇರಿದಂತೆ ಸಹಚರರನ್ನು ಬಂಧಿಸಲಾಗಿತ್ತು. ಬಳಿಕ ಶ್ರೀಧರ್ ಖುಲಾಸೆಯಾಗಿತ್ತು.

ಆದರೆ ಇದೀಗ ಇತ್ತೀಚೆಗೆ ಅಗ್ನಿಶ್ರೀಧರ್ ಮನೆ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲದೇ ಅಗ್ನಿಶ್ರೀಧರ್ ಡಿಜಿಪಿ ಆರ್ ಕೆ ದತ್ತಾ ಅವರಿಗೆ ಬರೆದ ಪತ್ರದಲ್ಲಿ, ಕೊತ್ವಾಲ್ ಕೊಲೆ ಪ್ರಕರಣದಲ್ಲಿ ತಾನು ಭಾಗಿಯಾಗಿದ್ದೆ ಎಂದು ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ಈ ಹಿನ್ನೆಲೆಯಲ್ಲಿ ಕೊತ್ವಾಲ್ ಕೊಲೆ ಪ್ರಕರಣಕ್ಕೆ ಮರುಜೀವ ನೀಡಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ. ಅಲ್ಲದೇ ಪ್ರಕರಣದ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು, ಅಗ್ನಿ ಶ್ರೀಧರ್ ಹಾಗೂ ಇತರರು ನೀಡಿರುವ ಹೇಳಿಕೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next