Advertisement

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

11:36 PM Apr 25, 2024 | Team Udayavani |

ಬೆಂಗಳೂರು: “ಆಸ್ತಿ ಹಂಚಿಕೆಗೆ ಸಂಬಂಧಿಸಿ ಕಾಂಗ್ರೆಸ್‌ ಸಂಚು ರೂಪಿಸಿದ್ದು, ಬದುಕಿದ್ದಾಗಲೂ ಮತ್ತು ಸತ್ತ ಮೇಲೂ ತೆರಿಗೆ ವಿಧಿಸಲಿದೆ’ ಎಂದು ಆರೋಪಿಸಿರುವ ಪ್ರಧಾನಿ  ವಿರುದ್ಧ ಕಾಂಗ್ರೆಸ್‌ ಚುನಾವಣ ಆಯೋಗಕ್ಕೆ ದೂರು ನೀಡಿದೆ.

Advertisement

ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣ ಪ್ರಚಾರದಲ್ಲಿ ಆಧಾರರಹಿತ ಆರೋಪ ಮಾಡಿದ್ದಾರೆ. ಮತದಾರರ ಓಲೈಕೆಗಾಗಿ ಇಂಥ ಸುಳ್ಳು ಹೇಳಿಕೆಗಳ ಮೂಲಕ ಜನರ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ದೂರಿದೆ.

ಜತೆಗೆ, ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಚುನಾವಣ ಪ್ರಚಾರದ ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಕ್ಷಣ ಇಲಾಖೆಯಲ್ಲೂ ಮುಸ್ಲಿಂ ಮೀಸಲಾತಿ ತರಲಿದೆ. ಈ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಸುಳಿವು ನೀಡಿದೆ ಎಂದು ಹೇಳಿದ್ದಾರೆ. ಆದರೆ, ಪ್ರಣಾಳಿಕೆಯಲ್ಲಿ ಎಲ್ಲಿಯೂ ಆ ರೀತಿಯ ಭರವಸೆಯ ಉಲ್ಲೇಖ ಇಲ್ಲ. ಸುಳ್ಳು ಆರೋಪ ಮಾಡಿರುವ ಇಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತ್ಯೇಕ ದೂರು ನೀಡಿ ಕಾಂಗ್ರೆಸ್‌ ಒತ್ತಾಯಿಸಿದೆ.

ಈ ಮಧ್ಯೆ, ಚುನಾವಣೆ ಬಳಿಕ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಅಂತ ಮೈತ್ರಿಪಕ್ಷಗಳು ಸುಳ್ಳು ಸುದ್ದಿ ಹರಡುತ್ತಿವೆ ಎಂದು ಆರೋಪಿಸಿ, ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಮುಖ್ಯ ಚುನಾವಣ ಆಯೋಗಕ್ಕೆ ಕಾಂಗ್ರೆಸ್‌ ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ದೂರು ನೀಡಿ¨ªಾರೆ.

Advertisement

Udayavani is now on Telegram. Click here to join our channel and stay updated with the latest news.

Next