Advertisement

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೆ.ಲ.ನರೇಂದ್ರ ಬಾಬು ಬಿಜೆಪಿಗೆ 

01:35 PM Sep 20, 2017 | |

ಬೆಂಗಳೂರು: ಕೆಲ ದಿನಗಳಿಂದ ಕಾಂಗ್ರೆಸ್‌ ಚಟುವಟಿಗೆಗಳಿಂದ ದೂರ ಉಳಿದಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಅವರು ಕೊನೆಗೂ ಕಾಂಗ್ರೆಸ್‌‌ಗೆ ಗುಡ್‌ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. 

Advertisement

ಪಕ್ಷದ ಇತ್ತೀಚಿಗಿನ ಬೆಳವಣಿಗೆಗಳಿಂದ ತೀವ್ರವಾಗಿ ಬೇಸತ್ತು ಕಾಂಗ್ರೆಸ್‌ ತೊರೆಯುತ್ತಿರುವುದಾಗಿ ನರೇಂದ್ರ ಬಾಬು ಅವರು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. 

ಇದೇ ವೇಳೆ ಮಹಾಲಕ್ಷ್ಮಿ ಲೇಔಟ್‌ನ ಜೆಡಿಎಸ್‌ ಶಾಸಕ ಗೋಪಾಲಯ್ಯ ಜೊತೆ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡು ಕ್ಷೇತ್ರಕ್ಕೆ ಭಾರಿ ಅನು ದಾನ ನೀಡಿದ್ದಾನೆ. ನನ್ನನ್ನು ತುಳಿಯಲು ಪಕ್ಷದಲ್ಲೇ ಸಂಚು ನಡೆದಿದೆ ಎಂದು ಆರೋಪಿಸಿದ್ದಾರೆ. 

ಅಕ್ಟೋಬರ್‌ 1 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. 

ನರೇಂದ್ರ ಬಾಬು ಗಾಂಧಿನಗರ ಕ್ಷೇತ್ರದ ಬಿಜೆಪಿ ಟಿಕೇಟ್‌ಗಾಗಿ ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next