Advertisement
ನಗರದ ಗುರುನಾನಕ್ ಭವನದಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು, ವಿಧಾನಸಭೆ ಚುನಾವಣೆಯ ಸೋಲಿನಿಂದ ಧೃತಿಗೆಡದೆ ಲೋಕಸಭೆ ಚುನಾವಣೆಗೆ ಸನ್ನದ್ಧರಾಗುವಂತೆ ಕರೆ ನೀಡಿದರು.
ಮುಂದೆ ಪ್ರಯೋಜನವಾಗಲಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಆ ರೀತಿ ಆಗುವುದಿಲ್ಲ. ಮೋದಿಯವರು ಕಳೆದ ಐದು ವರ್ಷದಲ್ಲಿ ಹೇಳಿದ್ದೇನು, ಮಾಡಿದ್ದೇನು ಎನ್ನುವುದನ್ನು ಜನರಿಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು.
Related Articles
Advertisement
ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅನ್ಯಾಯವಾಗಿದೆ. ಈ ಬಗ್ಗೆ ಪ್ರಧಾನಿಗೆ ಹಲವು ಬಾರಿ ಪತ್ರ ಬರೆದರೂ ಅವರಿಂದ ಉತ್ತರವೇ ಬರಲಿಲ್ಲ. ಕೇಂದ್ರದ ಯೋಜನೆಗಳು ಬೋಗಸ್ ಆಗಿರುವುದರಿಂದ ರಾಜ್ಯದ ಜನತೆಗೆ ಅದರಿಂದ ಜನತೆಗೆ ಯಾವುದೇ ಪ್ರಯೋಜನವಿಲ್ಲ ಎಂದರು.
ಚುನಾವಣೆ ಸಂದರ್ಭದಲ್ಲಿ ಮೋದಿ ರಾಜ್ಯ ಸರ್ಕಾರವನ್ನು ಪರ್ಸೆಂಟೇಜ್ ಸರ್ಕಾರ ಎಂದು ಟೀಕಿಸಿದರು. ಆದರೆ, ಲೋಕಪಾಲ್ ಮಸೂದೆ ಬಗ್ಗೆ ಇದುವರೆಗೂ ಚಕಾರ ಎತ್ತಿಲ್ಲ. ಬಿಜೆಪಿ ಸಮಾಜಕ್ಕೆ ಶಾಪವಾಗಿದ್ದು ಲೋಕಸಭೆ ಚುನಾವಣೆಯಲ್ಲಿ ಆ ಪಕ್ಷವನ್ನು ಸೋಲಿಸುವುದೇ ನಮ್ಮ ಗುರಿಯಾಗಬೇಕು ಎಂದು ಸೂಚಿಸಿದರು.
ಇದೇ ವೇಳೆ, ನಿಗಮ ಮಂಡಳಿಯಲ್ಲಿ ಕೇವಲ ಶಾಸಕರಿಗೆ ಅವಕಾಶ ಕೊಡದಂತೆ ಪದಾಧಿಕಾರಿಗಳು ಸಭೆಯಲ್ಲಿ ಒತ್ತಾಯಮಾಡಿದ್ದು, ಪಕ್ಷದ ಕಾರ್ಯಕರ್ತರಿಗೂ ನಿಗಮ-ಮಂಡಳಿಯಲ್ಲಿ ಸ್ಥಾನ ಕಲ್ಪಿಸುವ ಭರವಸೆ ನೀಡಲಾಯಿತು ಎಂದು ತಿಳಿದು ಬಂದಿದೆ. ಭಾನುವಾರ ನಡೆಯುವ ಸಿಡಬ್ಲೂéಸಿ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ಸಭೆಯ ಅಜೆಂಡಾ ಏನಿದೆ ಎಂದು ಗೊತ್ತಿಲ್ಲ. ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡದಿರುವ ಬಗ್ಗೆ ಮಾಹಿತಿ ಯಿಲ್ಲ. ಜಮಖಂಡಿ ವಿಧಾನಸಭೆ ಉಪ ಚುನಾವಣೆಗೆ ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
– ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಶಾಸಕಾಂಗ ಪಕ್ಷದ ನಾಯಕರ ಬದಲಾವಣೆ ವಿಚಾರ ಇಲ್ಲ. ಆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ
ಮಲ್ಲಿಕಾರ್ಜುನ ಖರ್ಗೆ ಸಿಡಬ್ಲೂéಸಿ ಸದಸ್ಯರಾಗಿರುವುದರಿಂದ ದೆಹಲಿಗೆ ಹೋಗುತ್ತಿದ್ದಾರೆ.
– ಡಾ.ಜಿ. ಪರಮೇಶ್ವರ್, ಉಪ ಮುಖ್ಯಮಂತ್ರಿ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಹೈ ಕಮಾಂಡ್ಗೆ ಬಿಟ್ಟ ನಿರ್ಧಾರ. ಕೇಂದ್ರದಲ್ಲಿ ಅಧಿಕಾರ ಹಿಡಿಯುವುದೇ ನಮ್ಮ ಮಂತ್ರವಾಗಬೇಕು. ನಾಯಕರ ಹಿಂದೆ ತಿರುಗುವುದು ಬಿಟ್ಟು ಪಕ್ಷಕ್ಕಾಗಿ ದುಡಿಯಬೇಕು.
– ಕೆ.ಸಿ. ವೇಣುಗೋಪಾಲ್,
ರಾಜ್ಯ ಕಾಂಗ್ರೆಸ್ ಉಸ್ತುವಾರಿ