Advertisement

ಬೇಸರ ಹೊರಹಾಕಿದ ಕೆಪಿಸಿಸಿ ಪದಾಧಿಕಾರಿಗಳು

06:35 AM Sep 24, 2018 | Team Udayavani |

ಬೆಂಗಳೂರು:: ಪಕ್ಷ ನಿಷ್ಠರಿಗೆ ಬೆಲೆಯೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು
ಅನಾಥರಾಗುವಂತಾಗಿದೆ. ಒಲ್ಲದ ಮನಸ್ಸಿನಿಂದ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್‌
ಸಂಘಟನೆಯೇ ನೆಲಕಚ್ಚುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಕೆಪಿಸಿಸಿ ಮುಂಚೂಣಿ ಘಟಕದ ಪದಾಧಿಕಾರಿಗಳ
ಸಭೆಯಲ್ಲಿ ಕೇಳಿಬಂದಿತು.

Advertisement

ಖಾಸಗಿ ಹೋಟೆಲ್‌ನಲ್ಲಿ ಕೆ.ಸಿ.ವೇಣುಗೋಪಾಲ್‌ ಪಾಲ್ಗೊಂಡಿದ್ದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಮ್ಮುಖದಲ್ಲೇ ಪದಾಧಿ ಕಾರಿಗಳು ದೂರಿದರು ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಗೆ ಪಕ್ಷದ ಸಂಘಟನೆ ಬಲಪಡಿಸಬೇಕೆಂದು ದಿನೇಶ್‌ ಗುಂಡೂರಾವ್‌ ಮಾತನಾಡುವಾಗ ಮಧ್ಯೆ ಪ್ರವೇಶಿಸಿದ ಕಿಸಾನ್‌ ಘಟಕದ ಪದಾಧಿಕಾರಿಯೊಬ್ಬರು, ನಾಯಕರ ಹಿಂಬಾಲಕರು ಹಾಗೂ ಪ್ರಭಾವಿಗಳ ಶಿಫಾರಸು ಪತ್ರ ಕೊಂಡು ಹೋದವರಿಗಷ್ಟೆ ಮಣೆ ಹಾಕಲಾಗುತ್ತಿದೆ ಎಂದು ಅಸಮಾಧಾನ ತೋಡಿಕೊಂಡರು.

ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ ಮೇಲುಗೈ ಸಾ ಧಿಸುತ್ತಿದೆ. ಕಾಂಗ್ರೆಸ್‌ನ ಸಚಿವರು ಪಕ್ಷಕ್ಕೂ ತಮಗೂ ಸಂಬಂಧವೇ ಇಲ್ಲದಂತೆ ನಡೆದು ಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next