Advertisement

ಚುನಾವಣಾಧಿಕಾರಿಗಳಿಂದ ಕೆಪಿಸಿಸಿ ಕಚೇರಿ ಪರಿಶೀಲನೆ

12:15 AM Apr 03, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಲ್ಲಿ ಚುನಾವಣಾಧಿಕಾರಿಗಳು ಕೆಪಿಸಿಸಿ ಕಚೇರಿಯನ್ನು ತಪಾಸಣೆ ಮಾಡಿ ತೆರಳಿದರು.

Advertisement

ಚುನಾವಣಾಧಿಕಾರಿಗಳು ಪೊಲೀಸ್‌ ಸಿಬ್ಬಂದಿಯೊಂದಿಗೆ ತೆರಳಿ ಪಕ್ಷದ ಕಚೇರಿಯ ಪ್ರವೇಶ ದ್ವಾರದಲ್ಲಿ ಅಳವಡಿಸಿರುವ ಮೆಟಲ್‌ ಡಿಕೆಕ್ಟರ್‌, ಸಿಸಿ ಕ್ಯಾಮರಾಗಳು ಸರಿಯಾಗಿ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.

ಈ ಕುರಿತು ವಿಧಾನ ಪರಿಷತ್‌ ಸದಸ್ಯ ಪ್ರಕಾಶ್‌ ರಾಠೊಡ್‌ ಮಾತನಾಡಿ, ಚುನಾವಣೆ ವೇಳೆ ಚುನಾವಣಾಧಿಕಾರಿಗಳು ಹಾಗೂ ಗುಪ್ತಚರ ಇಲಾಖೆಯ ಅಧಿಕಾರಿಗಳು ರಾಜಕೀಯ ಪಕ್ಷಗಳ ಕಚೇರಿಗಳನ್ನು ಪರಿಶೀಲನೆ ನಡೆಸುವುದು ಸಾಮಾನ್ಯ.

ಕಾಂಗ್ರೆಸ್‌ ಕಚೇರಿ ಪರಿಶೀಲನೆ ನಡೆಸಿದಂತೆ ಜೆಡಿಎಸ್‌ ಹಾಗೂ ಬಿಜೆಪಿ ಕಚೇರಿಗಳನ್ನೂ ಪರಿಶೀಲನೆ ನಡೆಸುತ್ತಾರೆ. ಚುನಾವಣೆ ವೇಳೆ ಪಕ್ಷದ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ ಹಾಗೂ ಗಣ್ಯವ್ಯಕ್ತಿಗಳ ಆಗಮನ ಸಂದರ್ಭ ಇರುವುದರಿಂದ ಭದ್ರತೆ ದೃಷ್ಟಿಯಿಂದ ಈ ರೀತಿಯ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next