Advertisement

ಹೊಸಬರು ಹಳಬರು ಎಂದಿಲ್ಲ, ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಬೇಕು: ಡಿಕೆ ಶಿವಕುಮಾರ್

04:55 PM Oct 04, 2020 | keerthan |

ಬೆಂಗಳೂರು: ಈ ಬಾರಿಯ ಉಪ ಚುನಾವಣೆಯಲ್ಲಿ ಯಾರು ಹೊಸಬರು ಹಳಬರು ಎಂದಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

Advertisement

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಶಿರಾ ಕ್ಷೇತ್ರದ ಕಡೆಗೆ ಎಲ್ಲರ ಗಮನ ಇದೆ. ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯೋಗ್ಯತೆ ಅನುಸಾರವಾಗಿ ಟಿಕೆಟ್ ನೀಡುವ ತೀರ್ಮಾನವನ್ನು ಕೆಪಿಸಿಸಿ ಯೇ ಮಾಡಲಿದೆ ಎಂದರು.

ಇದನ್ನೂ ಓದಿ:ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಡಿ.ಕೆ. ರವಿ ಪತ್ನಿ ಕುಸುಮಾ

ಇನ್ನು ಅನೇಕ ಜನರು ಕಾಂಗ್ರೆಸ್ ಸಿದ್ದಾಂತ ಒಪ್ಪಿ ಬರಲು ಆಸಕ್ತಿ ತೋರುತ್ತಿದ್ದಾರೆ. ನಮ್ಮ ಸಿದ್ದಾಂತ ಒಪ್ಪಿ ಬರುವವರನ್ನು ಸಮಿತಿ ಮೂಲಕ ಪರಿಶೀಲಿಸಿ ಸೇರಿಸಿಕೊಳ್ಳಲು ಕ್ರಮ ಕೈಗೊಳಲಾಗುವುದು ಎಂದು ಡಿಕೆಶಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next