Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಜ್ಜಿ ವಿಯೋಗ

11:13 AM Dec 17, 2021 | Team Udayavani |

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಅಜ್ಜಿ ನಿಂಗಮ್ಮ ಅವರು ಕನಕಪುರದ ಹಾರೋಹಳ್ಳಿಯ ದಯಾನಂದ ಸಾಗರ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿವ ಜಾವ ನಿಧನ ಹೊಂದಿದ್ದಾರೆ.

Advertisement

ನಿಂಗಮ್ಮ ಅವರಿಗೆ 106 ವರ್ಷಗಳಾಗಿದ್ದವು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಕನಕಪುರದ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಶುಕ್ರವಾರ ಸಂಜೆ 4.30 ಕ್ಕೆ ನಡೆಯಲಿದೆ.

ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರದ ಕಲಾಪದಲ್ಲಿ ಭಾಗವಹಿಸುವುದನ್ನು ಮೊಟಕುಗೊಳಿಸಿ, ಬೆಳಗಾವಿಯಿಂದ 12 ಗಂಟೆ ವಿಮಾನದ ಮೂಲಕ ಬೆಂಗಳೂರಿಗೆ, ನಂತರ ಅಲ್ಲಿಂದ ದೊಡ್ಡಾಲಹಳ್ಳಿಗೆ ತೆರಳಿ, ಅಜ್ಜಿಯವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next