Advertisement

ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹ ಬರಹ: ಕೆಪಿಸಿಸಿ ಸೋಷಿಯಲ್ ಮೀಡಿಯಾ ವಿಭಾಗದ ಕಾರ್ಯದರ್ಶಿ ಬಂಧನ

02:38 PM Aug 03, 2020 | keerthan |

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರಕ್ಕೆ ಸಾಮಾಜಿಕ ಜಾಲಾತಾಣಗಳಲ್ಲಿ ಆಕ್ಷೇಪಾರ್ಹವಾಗಿ ಬರೆದ ಕಾರಣಕ್ಕೆ ಕೆಪಿಸಿಸಿ ಸೋಷಿಯಲ್ ಮೀಡಿಯಾ ವಿಭಾಗದ ಕಾರ್ಯದರ್ಶಿ ಆನಂದ್ ಪ್ರಸಾದ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಆರ್ ಜೆ ನವೀದ್ ಎಂಬವರು ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಮಿತ್ ಶಾ ಗೆ ಸೋಂಕು ದೃಢವಾದ ಬಗ್ಗೆ ಬರೆದುಕೊಂಡಿದ್ದರು. ಇದಕ್ಕೆ ಆನಂದ್ ಪ್ರಸಾದ್ ಆಕ್ಷೇಪಾರ್ಹ ಕಮೆಂಟ್ ಮಾಡಿದ್ದರು. ಇದೇ ರೀತಿ ಇನ್ನೊಂದು ಪೋಸ್ಟ್ ಗೂ ಕಮೆಂಟ್ ಮಾಡಿದ್ದರು.

ಪ್ರಕರಣದ ಸಂಬಂಧ ಆನಂದ್ ಪ್ರಸಾದ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಕೆ ಆರ್ ಪುರಂ ನಿವಾಸದಿಂದ ನಿನ್ನೆ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆ ವೈದ್ಯನಿಂದ ಮಹಿಳಾ ಕೋವಿಡ್ ರೋಗಿಗೆ ಲೈಂಗಿಕ ಕಿರುಕುಳ: ದೂರು ದಾಖಲು

Advertisement

ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ಮತ್ತೆ ಆರು ಮಂದಿಗೆ ಕೋವಿಡ್ ಸೋಂಕು ದೃಢ

Advertisement

Udayavani is now on Telegram. Click here to join our channel and stay updated with the latest news.

Next