Advertisement

ಕೆಪಿಜೆಪಿ ವಿಲೀನಕ್ಕೆ ಸಮರ್ಥನೆ

11:05 PM Jun 18, 2019 | Team Udayavani |

ಬೆಂಗಳೂರು: ಕೆಪಿಜೆಪಿ ಪಕ್ಷವನ್ನು ಕಾಂಗ್ರೆಸ್‌ನಲ್ಲಿ ವಿಲೀನ ಮಾಡಿರುವ ನಿರ್ಧಾರವನ್ನು ಸಚಿವ ಆರ್‌.ಶಂಕರ್‌ ಸಮರ್ಥಿಸಿಕೊಂಡಿದ್ದಾರೆ.

Advertisement

ಸಚಿವರಾದ ಮೇಲೆ ಕೆಪಿಸಿಸಿ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿ, ಕೆಪಿಸಿಸಿ ಅಧ್ಯಕ್ಷರನ್ನು ಅಭಿನಂದಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೆಪಿಜೆಪಿಯಿಂದ ನಾನೊಬ್ಬನೇ ಗೆದ್ದಿದ್ದೇನೆ.

ಪಕ್ಷದ ಮೂರನೇ ಒಂದು ಭಾಗ ಬಹುಮತದ ಪ್ರಕಾರ ನಾನು ಕಾಂಗ್ರೆಸ್‌ಗೆ ಸೇರಿದ್ದೇನೆ. ನಾನು ಕಾಂಗ್ರೆಸ್‌ ಪಕ್ಷದ ಜೊತೆ ಇದ್ದೇನೆ. ಮುಂದೆ ಕಾಂಗ್ರೆಸ್‌ ಪಕ್ಷ ಕಟ್ಟುತ್ತೇನೆ. ಕಾನೂನು ಚೌಕಟ್ಟಿನಲ್ಲಿ ಕಾಂಗ್ರೆಸ್‌ನ ಅಧಿಕೃತ ಸದಸ್ಯತ್ವ ಪಡೆಯುವ ಪ್ರಕ್ರಿಯೆ ನಡೆಸಿದ್ದೇನೆ’ ಎಂದು ಹೇಳಿದರು.

ಇದೇ ವೇಳೆ, ಕಾಂಗ್ರೆಸ್‌ ಕೋಟಾದಲ್ಲಿ ಪೌರಾಡಳಿತ ಖಾತೆ ಒಂದೇ ಇರುವುದರಿಂದ ಅದೇ ಖಾತೆ ನೀಡುವ ವಿಶ್ವಾಸ ಇದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next