Advertisement

ಕೆಪಿಪಿಸಿ ನಕಲಿ ವೆಬ್ ಸೈಟ್ ಮಾಡಿ ಅಪಪ್ರಚಾರ; ಪೊಲೀಸ್ ಆಯುಕ್ತರಿಗೆ ದೂರು

06:19 PM Feb 04, 2023 | Team Udayavani |

ಬೆಂಗಳೂರು: ಕೆಪಿಪಿಸಿ ನಕಲಿ ವೆಬ್ ಸೈಟ್ ಸೃಷ್ಟಿಸಿ ಅಪಪ್ರಚಾರ ಮಾಡಲಾಗಿದ್ದು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.

Advertisement

ನಕಲಿ ವೆಬ್ ಸೈಟ್ ನಲ್ಲಿ ಕಾಂಗ್ರೆಸ್ ನಾಯಕರ ಫೋಟೋಗಳನ್ನು ಬಳಸಿ ವಿವಿಧ ತಲೆ ಬರಹಗಳನ್ನು ನೀಡಿ ಕಾಂಗ್ರೆಸ್ ಪಕ್ಷವನ್ನು ವಾಚಾಮಗೋಚರವಾಗಿ ಟೀಕಿಸಲಾಗಿತ್ತು. 2013 ರಿಂದ 2018 ರ ವರೆಗಿನ ಕಾಂಗ್ರೆಸ್ ಅಧಿಕಾರಾವಧಿಯ ಸಾಧನೆಗಳು, ಜನಪ್ರಿಯ ಹಗರಣಗಳು, ಪ್ರಮುಖ ಅಪರಾಧಗಳು, ಕೋಮುಗಲಭೆಗಳು, ಅಂಗಸಂಸ್ಥೆಗಳು, ತುಕ್ಡೇ ತುಕ್ಡೇ ಗ್ಯಾಂಗ್, ಅರ್ಬನ್ ನಕ್ಸಲರು, ದೇಶ ವಿರೋಧಿಗಳು ಎಂದು ಬರೆಯಲಾಗಿತ್ತು.

ಹೇಡಿಗಳ ಕೊನೆಯ ಅಸ್ತ್ರ ಅಪಪ್ರಚಾರ, ಕುಯುಕ್ತಿ ಎನ್ನುವ ಮಾತಿದೆ,ಅದರಂತೆಯೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಹೆಸರಿನ ನಕಲಿ ಪತ್ರ ಹಾಗೂ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿ ತೇಜೋವಧೆ ಮಾಡಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ದೂರು ಸಲ್ಲಿಸಲಾಗಿದೆ” ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next