Advertisement

ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು

03:58 PM Oct 13, 2020 | keerthan |

ವಿಜಯಪುರ: ಜಿಲ್ಲೆಯ ಆಲಮೇಲ ಬಳಿ ಇರುವ ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕನೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

Advertisement

ಆಲಮೇಲ ಬಳಿಯ ಕಡಣಿ ಗ್ರಾಮದ ಬಳಿಯ ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಕಾರ್ಮಿಕನನ್ನು ಆಲಮೇಲ ಮೂಲದ ಸುರೇಶ ಪೂಜಾರಿ (19) ಎಂದು ಗುರುತಿಸಲಾಗಿದೆ.

ಸಕ್ಕರೆ ಕಾರ್ಖಾನೆಯಲ್ಲಿ ಸೂಕ್ತ ಸುರಕ್ಷಾ ಸಾಧನಗಳಿಲ್ಲದೇ ಕರ್ತವ್ಯದಲ್ಲಿ ತೊಡಗಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಮೃತಪಟ್ಟಿದ್ದಾನೆ. ಕಾರ್ಖಾನೆ ಮಾಲೀಕರು ಕಾರ್ಮಿಕರ ಸುರಕ್ಷತೆಗೆ ಅಗತ್ಯ ಸೌಲಭ್ಯ ಕಲ್ಪಿಸದಿರುವುದೇ ಈ ದುರಂತಕ್ಕೆ ಕಾರಣ ಎಂದು ಮೃತನ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:ರಸ್ತೆ ಗುಂಡಿಗಳಿಗೆ ಕೆಂಪು ಮಣ್ಣು ಕಟ್ಟಡ ತ್ಯಾಜ್ಯ! ಜವಾಬ್ದಾರಿ ಮರೆಯಿತೇ ಪ್ರಾಧಿಕಾರ?

ಅಲಮೇಲ ಪಟ್ಟಣದಲ್ಲಿ ಇರುವ ಮೃತ ಸುರೇಶ ನಿವಾಸದ ಬಳಿ ಸಂಬಂಧಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪಟ್ಟುಹಿಡಿದಿದ್ದಾರೆ

Advertisement

ಸುದ್ದಿ ತಿಳಿಯುತ್ತಲೇ ಆಲಮೇಲ ಠಾಣೆ ಪೊಲೀಸರು ಕಾರ್ಖಾನೆಗೆ ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next