Advertisement

ಕೆಪಿಎಸ್‌ಸಿ: ಸ್ಪರ್ಧಾತ್ಮಕ ಪರೀಕ್ಷೆ ಮುಂದಕ್ಕೆ

09:18 AM Feb 03, 2018 | |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಫೆ.4ರಂದು ನಡೆಸಲು ಉದ್ದೇಶಿಸಿದ್ದ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. “ಅನಿವಾರ್ಯ ಕಾರಣ’ಗಳಿಂದಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ಹೇಳಲಾಗಿದೆ.

Advertisement

ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಫೆ.4ರಂದು “ಬೆಂಗಳೂರು ಬಂದ್‌’ಗೆ ಕರೆ ನೀಡಿದ್ದನ್ನು ಇಲ್ಲಿನ ಗಮನಿಸಬಹುದು. ಆದರೆ, ಬಂದ್‌ ಕರೆ ಕೊಡುವುದು “ಸಂವಿಧಾನಬಾಹಿರ’ ಎಂದು ಶುಕ್ರವಾರ ಹೈಕೋರ್ಟ್‌ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next