Advertisement

ಕೆಪಿಎಸ್‌ಸಿ: ದಾಖಲೆಗಳ ಪರಿಶೀಲನೆ ಮುಂದಕ್ಕೆ

11:17 PM Mar 14, 2020 | Lakshmi GovindaRaj |

ಬೆಂಗಳೂರು: “ಕೊರೊನಾ ವೈರಸ್‌’ ಭೀತಿ ಪರಿಣಾಮವಾಗಿ ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ವಿವಿಧ ನ್ಯಾಯಾಂಗ ಘಟಕಗಳಲ್ಲಿ 269 ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ.

Advertisement

ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುವ ಭೀತಿ ಎದುರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶನಿವಾರದಿಂದ (ಮಾ.14)ಒಂದು ವಾರ ರಾಜ್ಯಾದ್ಯಂತ ಬಹು ಸಂಖ್ಯೆಯಲ್ಲಿ ಜನ ಸೇರುವ ಸಭೆ, ಸಮಾರಂಭ, ಸಮಾವೇಶ, ಶಾಲಾ/ಕಾಲೇಜು ಇತ್ಯಾದಿಗಳನ್ನು ಸ್ಥಗಿತಗೊಳಿಸಲು ಆದೇಶಿಸಿರುವ ಹಿನ್ನೆಲೆಯಲ್ಲಿ ಮಾ.16ರಿಂದ 20ರವರೆಗೆ ನಿಗದಿಯಾಗಿದ್ದ ನ್ಯಾಯಾಂಗ ಘಟಕಗಳಲ್ಲಿ 269 ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಮೂಲ ದಾಖಲೆ ಪರಿಶೀಲನೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next