Advertisement

ಕೆಪಿಟಿಸಿಎಲ್‌ ಪರೀಕ್ಷೆ ಅಕ್ರಮ ಪರೀಕ್ಷೆ ಪ್ರಕರಣ: ಮತ್ತಿಬ್ಬರ ಬಂಧನ

11:29 PM Oct 18, 2022 | Team Udayavani |

ಬೆಳಗಾವಿ: ಕೆಪಿಟಿ ಸಿಎಲ್‌ ಕಿರಿಯ ದರ್ಜೆ ಸಹಾಯಕ ಹುದ್ದೆ ಅಕ್ರಮ ಪರೀಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಮತ್ತೆ ಇಬ್ಬರನ್ನು ಬಂಧಿಸಲಾಗಿದೆ.

Advertisement

ಗೋಕಾಕ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26) ಹಾಗೂ ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ (27) ಎನ್ನುವವರನ್ನು ಬಂಧಿಸಲಾಗಿದೆ. ಬಂಧಿ ತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಂಧಿತರ ಸಂಖ್ಯೆ 22ಕ್ಕೇರಿಕೆಯಾಗಿದೆ.

ಯಲ್ಲಪ್ಪ ರಕ್ಷಿ ಎಲೆಕ್ಟ್ರಾನಿಕ್‌ ಡಿವೈಸ್‌ಗಳನ್ನು ಅಭ್ಯರ್ಥಿಗಳಿಗೆ ಕೊಟ್ಟಿದ್ದ. ಶಿರಹಟ್ಟಿಯಲ್ಲಿ ಪ್ರಶ್ನೆ ಪತ್ರಿಕೆಗೆ ಉತ್ತರ ಹೇಳಿದ್ದ. ಈತನಿಂದ ಮೊಬೈಲ್‌ ಹಾಗೂ ಕಾರು ವಶಕ್ಕೆ ಪಡೆದುಕೊಳ್ಳಲಾಗಿದೆ. ನಾಗಪ್ಪ ದೊಡಮನಿ ಎಲೆಕ್ಟ್ರಾನಿಕ್‌ ಡಿವೈಸ್‌ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದ. ಈತನಿಂದ ಎಲೆಕ್ಟ್ರಾನಿಕ್‌ ಡಿವೈಸ್‌ ಮತ್ತು ಮೊಬೈಲ್‌ ವಶಕ್ಕೆ ಪಡೆದುಕೊಳ್ಳಲಾಗಿದೆ.

ಜೈಲಿನಿಂದ ಬರುತ್ತಿದ್ದಂತೆ ಸೆರೆ
ಕೆಪಿಟಿಸಿಎಲ್‌ ಅಕ್ರಮ ಪರೀಕ್ಷೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೂಡಲಗಿಯ ಸಂಜೀವ ಭಂಡಾರಿ ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಪೊಲೀಸ್‌ ಕಾನ್‌ಸ್ಟೆಬಲ್‌ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿ ಸಿದ್ದಾರೆ. 2021ರಲ್ಲಿ ನಡೆದ ಪೊಲೀಸ್‌ ಕಾನ್‌ಸ್ಟೆಬಲ್‌ ಪರೀಕ್ಷೆ ಅಕ್ರಮದಲ್ಲೂ ಈತ ಆರೋಪಿ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next