Advertisement

ಕೆಪಿಟಿಸಿಎಲ್‌ ಪರೀಕ್ಷೆ ಅಕ್ರಮ: ಮತ್ತೆ ಮೂವರ ಸೆರೆ

10:40 PM Sep 16, 2022 | Team Udayavani |

ಬೆಳಗಾವಿ: ಕೆಪಿಟಿಸಿಎಲ್‌ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಬಂಧಿಸಲಾಗಿದೆ.

Advertisement

ಅರಭಾವಿಯ ಅಕ್ಷಯ್‌ ದುಂದಪ್ಪ ಭಂಡಾರಿ (33), ಬಿರಣಗಡ್ಡಿಯ ಬಸವರಾಜ ರುದ್ರಪ್ಪ ದುಂದನಟಿ (34) ಹಾಗೂ ಶ್ರೀಧರ ಲಕ್ಕಪ್ಪ ಕಟ್ಟಿಕಾರ (22) ಬಂಧಿತ ಆರೋಪಿಗಳು.

ವಿಚಾರಣೆ ವೇಳೆ ಅಕ್ಷಯ್‌ ಭಂಡಾರಿ ಬೆಂಗಳೂರಿನಿಂದ ಎಲೆಕ್ಟ್ರಾನಿಕ್‌ ಡಿವೈಸ್‌ ತಂದು ಸಂಜು ಭಂಡಾರಿಗೆ ಕೊಟ್ಟಿದ್ದ. ಆರೋಪಿಯಿಂದ ಒಂದು ಮೊಬೈಲ್‌, 50 ಖಾಲಿ ಎಲೆಕ್ಟ್ರಾನಿಕ್‌ ಡಿವೈಸ್‌ ಮತ್ತು 18 ಮೋಡಿಫೈ ಮಾಡಿದ ಎಲೆಕ್ಟ್ರಾನಿಕ್‌ ಡಿವೈಸ್‌ ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ ಬಸವರಾಜ ರುದ್ರಪ್ಪ ದುಂದನಟಿ ಶಿರಹಟ್ಟಿಯಲ್ಲಿ ಪ್ರಶ್ನೆಪತ್ರಿಕೆಗಳಿಗೆ ಉತ್ತರ ಹೇಳಿರುವುದು ಬೆಳಕಿಗೆ ಬಂದಿದೆ.

ಆರೋಪಿಯಿಂದ ಮೊಬೈಲ್‌, ಬೈಕ್‌ ಜಪ್ತಿ ಮಾಡಲಾಗಿದೆ. ಮತ್ತೊಬ್ಬ ಆರೋಪಿ ಶ್ರೀಧರ ಲಕ್ಕಪ್ಪ ಕಟ್ಟಿಕಾರ್‌ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್‌ ಡಿವೈಸ್‌ ಕೊಟ್ಟಿರುವುದು ವಿಚಾರಣೆ ಸಮಯದಲ್ಲಿ ಗೊತ್ತಾಗಿದೆ. ಈ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಎಸ್‌ಪಿ ಸಂಜೀವ ಪಾಟೀಲ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next