Advertisement

ಕೆಪಿಟಿಸಿಎಲ್‌ ಅಕ್ರಮ ಪರೀಕ್ಷೆ: ಮತ್ತಿಬ್ಬರು ಆರೋಪಿಗಳ ಬಂಧನ

09:37 PM Sep 05, 2022 | Team Udayavani |

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ದರ್ಜೆ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಮತ್ತಿಬ್ಬರು ಆರೋಪಿಗಳನ್ನು ಗೋಕಾಕ ಪೊಲೀಸರು ಬಂಧಿಸಿದ್ದಾರೆ.

Advertisement

ಹನಗಂಡಿ ಗ್ರಾಮದ ಬೀರಪ್ಪ ಲಕ್ಷ್ಮಣ ಹನಗಂಡಿ (24) ಹಾಗೂ ಅರಭಾಂವಿಯ ಶಿವಾನಂದ ದುಂಡಪ್ಪ ಹಳ್ಳೂರ (23) ಬಂಧಿತರಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹುಕ್ಕೇರಿ ತಾಲೂಕಿನ ಬಿ.ಕೆ.ಶಿರಹಟ್ಟಿ ಗ್ರಾಮದಲ್ಲಿ ಪ್ರಶ್ನೆಗಳನ್ನು ಪ್ರಿಂಟ್‌ ತೆಗೆಯಲು ಬೀರಪ್ಪ ಲ್ಯಾಪ್‌ಟಾಪ್‌ ಹಾಗೂ ಸ್ಮಾರ್ಟ್‌ ವಾಚ್‌ ತಂದು ಕೊಟ್ಟಿದ್ದ. ಈತನಿಂದ ಮೊಬೈಲ್‌ ಹಾಗೂ ಲ್ಯಾಪ್‌ಟಾಪ್‌ ವಶಪಡಿಸಿಕೊಳ್ಳಲಾಗಿದೆ.

ಶಿವಾನಂದ ಹಳ್ಳೂರ ಎಂಬಾತ ಎಲೆಕ್ಟ್ರಾನಿಕ್ಸ್‌ ಡಿವೈಸ್‌ ತೆಗೆದುಕೊಂಡು ಪರೀಕ್ಷೆ ಬರೆಯಲು ಹೋಗಿದ್ದ. ಈತನಿಂದ 5 ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌ ಡಿವೈಸ್‌ ವಶಪಡಿಸಿಕೊಳ್ಳಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಕೆಲವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next