Advertisement

ಕೆ.ಆರ್‌.ನಗರ ಪುರಸಭೆ ಅಧ್ಯಕ್ಷೆ ಹರ್ಷಲತಾ

11:53 AM Jul 13, 2018 | Team Udayavani |

ಕೆ.ಆರ್‌.ನಗರ: ಪಟ್ಟಣದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ 16ನೇ ವಾರ್ಡ್‌ ಸದಸ್ಯೆ ಹರ್ಷಲತಾ ಜೆಡಿಎಸ್‌ ಸದಸ್ಯರ ಬೆಂಬಲದೊಂದಿಗೆ ಆಯ್ಕೆಯಾದರು. ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಹಾಲಕ್ಷ್ಮೀ ಮತ್ತು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಹರ್ಷಲತಾ ನಾಮಪತ್ರ ಸಲ್ಲಿಸಿದ್ದರು.

Advertisement

ಇಬ್ಬರು ಪುರಸಭಾ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಾಗಿ ಚುನಾವಣೆಗೆ ಸ್ಪರ್ಧಿಸಿದ್ದರಿಂದ ಸದಸ್ಯರು ಕೈ ಎತ್ತುವ ಮೂಲಕ ಬೆಂಬಲ ಸೂಚಿಸುವಂತೆ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ತಹಶೀಲ್ದಾರ್‌ ಮಹೇಶ್‌ಚಂದ್ರ ತಿಳಿಸಿದರು. 23 ಸದಸ್ಯರ ಪೈಕಿ 21 ಸದಸ್ಯರು ಹರ್ಷಲತಾಗೆ ಕೈ ಎತ್ತಿ ಬೆಂಬಲ ಸೂಚಿಸಿದರು. ಹರ್ಷಲತಾ ಆಯ್ಕೆಯನ್ನು ಚುನಾವಣಾಧಿಕಾರಿ ಮಹೇಶ್‌ಚಂದ್ರ ಘೋಷಿಸಿದರು. 

ಅಧ್ಯಕ್ಷೆ ಹರ್ಷಲತಾ ಮಾತನಾಡಿ, ಜೆಡಿಎಸ್‌ ಎಲ್ಲಾ ಸದಸ್ಯರು ಮತ್ತು ಕಾಂಗ್ರೆಸ್‌ ಸದಸ್ಯರು ತಮ್ಮನ್ನು ಆಯ್ಕೆಯಾಗಲು ಬೆಂಬಲಿಸಿದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಎಲ್ಲಾ ಸದಸ್ಯರ ಸಹಕಾರದೊಂದಿಗೆ ಪುರಸಭೆ ಅಭಿವೃದ್ಧಿಗೆ ಮತ್ತು ಮೂಲ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸುವುದಾಗಿ ತಿಳಿಸಿದರು.

ಫಲಿತಾಂಶ ಪ್ರಕಟವಾಗುತಿದ್ದಂತೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್‌.ಚನ್ನಬಸಪ್ಪ, ತಾ.ಜೆಡಿಎಸ್‌ ಅಧ್ಯಕ್ಷ ಚಂದ್ರಶೇಜರ್‌, ಎಂ.ಸಂತೋಷ್‌ಗೌಡ, ಕೆ.ಎನ್‌.ಬಸಂತ, ಡಾ. ಮೆಹಬೂಬ್‌ಖಾನ್‌, ಪುರಸಭಾ ಸದಸ್ಯರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next