Advertisement

ಜಿಲ್ಲೆಯಲ್ಲಿ ಜೆಡಿಎಸ್‌ ಗೆಲ್ಲಲ್ಲ: ಸಿದ್ದು  ಮಾತು ಸತ್ಯ

03:52 PM May 08, 2022 | Team Udayavani |

ಕೆ.ಆರ್‌.ನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಯಾವೊಂದು ಕ್ಷೇತ್ರದಲ್ಲಿಯೂ ಜೆಡಿಎಸ್‌ ಗೆಲ್ಲುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿರುವುದು ಅಕ್ಷರಶಃ ಸತ್ಯ ಎಂದು ತಾಲೂಕು ಕಾಂಗ್ರೆಸ್‌ ವಕ್ತಾರ ಸೈಯದ್‌ ಜಾಬೀರ್‌ ಹೇಳಿದರು.

Advertisement

ಕಳೆದ 5 ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಶಾಸಕ ಸಾ.ರಾ.ಮಹೇಶ್‌ ಅವರು ಸಿದ್ದರಾಮಯ್ಯನವರಿಗೆ ಸ್ಫರ್ಧೆ ಮಾಡಲು ರಾಜ್ಯದಲ್ಲಿ ಯಾವುದೇ ಕ್ಷೇತ್ರ ಇಲ್ಲ ಎಂದಿದ್ದಾರೆ. ಆದರೆ ಈ ವಿಚಾರವನ್ನು ಕೇಳಲು ಅವರಿಗೆ ಯಾವ ಅಧಿಕಾರ ಇದೆ ಎಂದು ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಪ್ರಶ್ನಿಸಿದರು.

ರಾಜ್ಯ ಜೆಡಿಎಸ್‌ ಪಕ್ಷಕ್ಕೆ ಹೈಕಮಾಂಡ್‌ ಯಾರು ಎಂದು ಕೇಳಿದ ತಾಲೂಕು ಕಾಂಗ್ರೆಸ್‌ ವಕ್ತಾರರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಮೈಸೂರಿಗೆ ಬಂದಾಗ ಜಿ.ಟಿ.ದೇವೇಗೌಡರ ಕುಟುಂಬಕ್ಕೆ ನಮ್ಮ ಪಕ್ಷದ ಬಾಗಿಲು ಮುಚ್ಚಿದೆ ಎನ್ನುತ್ತಾರೆ. ಆದರೆ ಶಾಸಕ ಸಾ.ರಾ. ಮಹೇಶ್‌ ಅಪ್ಪ ಮತ್ತು ಮಕ್ಕಳಿಗೆ ಚುನಾವಣೆಯಲ್ಲಿ ಸ್ಫರ್ಧಿಸಲು ಅವಕಾಶ ಮಾಡಿಕೊಡಲು ವರಿಷ್ಠರ ಮನವೊಲಿಸುತ್ತೇನೆ ಎನ್ನುತ್ತಾರೆ. ಹಾಗಾದರೆ ಪಕ್ಷಕ್ಕೆ ನಿಜವಾದ ನಾಯಕರು ಯಾರು ಎಂದು ಕೇಳಿದರು.

ಶಾಸಕ ಸಾ.ರಾ.ಮಹೇಶ್‌ ಅವರು ಕಳೆದ ಮೂರು ಚುನಾವಣೆಗಳಲ್ಲಿ ತಾವು ಪಡೆದ ಮತಗಳು ಮತ್ತು ಅವುಗಳ ಅಂತರದ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಕೆಎಂಎಫ್ ಚುನಾವಣೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಯವರು ಜಿಲ್ಲೆಗೆ ಬಂದು ಪ್ರಚಾರ ಮಾಡಿದರೂ ಫ‌ಲಿತಾಂಶ ಏನಾಯಿತು ಎಂದು ನೆನಪಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂದೆ ಖಾಸಗಿ ತುರ್ತು ವಾಹನಗಳ ಚಾಲಕರು ಮೈಸೂರಿಗೆ ರೋಗಿಗಳನ್ನು ಕರೆದುಕೊಂಡು ಹೋಗುವ ನೆಪದಲ್ಲಿ ಹಗಲು ದರೋಡೆ ಮಾಡುತ್ತಿದ್ದು, ಮಾತೆತ್ತಿದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಶಾಸಕರು ಈ ವಿಚಾರದ ಬಗ್ಗೆ ಗಮನ ಹರಿಸಬೇಕು ಕಿಡಿಕಾರಿದರು.

Advertisement

ನಗರ ಕಾಂಗ್ರೆಸ್‌ ಅಧ್ಯಕ್ಷ ಎಂ.ಜೆ.ರಮೇಶ್‌, ಸಾಲಿಗ್ರಾಮ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಉದಯಶಂಕರ್‌, ನಗರ ಯೋಜನಾ ಪ್ರಾಧಿಕಾರದ ಮಾಜಿ ನಿರ್ದೇಶಕ ಕೆ.ಎನ್‌.ಪ್ರಸನ್ನಕುಮಾರ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next