Advertisement

ಕೋಲಾರದಲ್ಲಿ ಸಿದ್ದು ಸ್ಪರ್ಧೆ: ಹೈಕಮಾಂಡ್‌ ನಿರ್ಧರಿಸುತ್ತೆ; ಕೆ.ಆರ್‌.ರಮೇಶ್‌ ಕುಮಾರ್‌

08:02 PM Nov 06, 2022 | Team Udayavani |

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಕುರಿತು ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತೆ, ಅವರ ಸ್ಪರ್ಧೆ ಬಗ್ಗೆ ನಿರ್ಧರಿಸಲು ನಾನೇನು ಎಐಸಿಸಿ ಅಧ್ಯಕ್ಷನಲ್ಲ ಎಂದು ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸ್ಪರ್ಧೆ ನಿರ್ಧಾರ ಮಾಡೋಕೆ ನಾನು ಎಐಸಿಸಿ ಅಧ್ಯಕ್ಷನಲ್ಲ, ಸಿದ್ದರಾಮಯ್ಯ ಅವರ ಸ್ಪರ್ಧೆ ಹೈಕಮಾಂಡ್‌ ನಿರ್ಧರಿಸುತ್ತೆ ಎಂದು ಹೇಳಿದ ಅವರು, ಯಾರೇ ಸ್ಪರ್ಧಿಸಬೇಕಿದ್ದರೂ ಕಾಂಗ್ರೆಸ್‌ನಲ್ಲಿ ಅರ್ಜಿ ಹಾಕಬೇಕು ಎಂದರು.

ಕೋಲಾರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸುವಂತೆ ಅವರ ಅಭಿಮಾನಿಗಳ ಮನವಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ, 25 ವರ್ಷ ದಾಟಿದವರು ಯಾರು ಬೇಕಾದರೂ ಸ್ಪರ್ಧಿಸಬಹುದು. ಮಾನಸಿಕ ಸ್ಥಿಮಿತ ಸರಿಯಿರಬೇಕು. ಕ್ರಿಮಿನಲ್‌ ಆರೋಪ ಸಾಬೀತು ಆಗಿರದವರು ಸ್ಪರ್ಧಿಸಬಾರದು ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೆ ಟಾಂಗ್‌ ನೀಡಿದರು.

ಕೆ.ಎಚ್‌.ಮುನಿಯಪ್ಪ ಮತ್ತು ನನ್ನ ನಡುವೆ ಈಗ ಭಿನ್ನಾಭಿಪ್ರಾಯವಿಲ್ಲ. ನಾನು ಊರಿಂದ ಬಂದೆ, ಅವರು ಎಲ್ಲೋ ಹೋಗಿರುತ್ತಾರೆ, ಮುಂದಿನ ದಿನಗಳಲ್ಲಿ ಸಮಯ, ಸಂದರ್ಭ ಬಂದಾಗ, ಇಬ್ಬರು ಒಟ್ಟಾಗಿ ಕಾಣಿಸಿಕೊಳ್ತೀವಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next