Advertisement
ಆದರೆ, ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಭೇಟಿಗೆ ನಿರಾಕರಿಸಿದ್ದಾರೆ ಎಂದು ಕೃಷ್ಣ ಅವರ ಆಪ್ತ ಮೂಲಗಳು ತಿಳಿಸಿವೆ.ಇನ್ನೊಂದೆಡೆ ಎಸ್.ಎಂ. ಕೃಷ್ಣ ಅವರು ಬಿಜೆಪಿ ಸೇರುತ್ತಾರೆಂದು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೂಡ ಭಾನುವಾರ ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಕೃಷ್ಣ ಅವರ ಮೂಲಗಳ ಪ್ರಕಾರ ಭಾನುವಾರ ಯಾರ ಭೇಟಿಗೂ ಅವಕಾಶ ನೀಡದಂತೆ ಕೃಷ್ಣ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಭಾನುವಾರ ಯಡಿಯೂರಪ್ಪ, ಎಸ್.ಎಂ.ಕೆ. ಅವರನ್ನು ಭೇಟಿ ಮಾಡುವುದು ಅನುಮಾನ ಎಂದು ಹೇಳಲಾಗುತ್ತಿದೆ.
ನೇರವಾಗಿ ಮಾತುಕತೆಗೆ ಕಳುಹಿಸಿಕೊಡಬಹುದು ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.
Related Articles
ಬೆಂಗಳೂರು: ಸ್ಫೂರ್ತಿ ಇಲ್ಲದ ನಾಯಕತ್ವದಿಂದಾಗಿ ವಿವೇಕವುಳ್ಳವರು ಮತ್ತು ಸ್ವಾಭಿಮಾನಿಗಳು ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ವೆಂಕಯ್ಯನಾಯ್ಡು ತಿಳಿಸಿದ್ದಾರೆ. ಎಸ್.ಎಂ.ಕೃಷ್ಣ ಕಾಂಗ್ರೆಸ್ ತೊರೆದಿರುವ
ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನಲ್ಲಿ ಸ್ಫೂರ್ತಿದಾಯಕ ನಾಯಕರಿಲ್ಲ. ಹೀಗಾಗಿ ಅವರ ಬಗ್ಗೆ ಕಾಂಗ್ರೆಸಿಗರೇ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಅಜಿತ್ ಜೋಗಿ, ವಿಜಯ್ ಬಹುಗುಣ, ರೀಟಾ ಬಹುಗುಣ ಮುಂತಾದವರೇ ಸಾಕ್ಷಿ ಎಂದು ಹೇಳಿದರು. ಎಸ್.ಎಂ.ಕೃಷ್ಣ ಅವರು ಬಿಜೆಪಿ ಸೇರುವ ಬಗ್ಗೆ ತಮಗೇನೂ ಮಾಹಿತಿ ಇಲ್ಲ. ಆದರೆ, ಅವರು
ಕಾಂಗ್ರೆಸ್ ತೊರೆದಿರುವುದು ಗೊತ್ತಿದೆ. ಅವರು ಬಿಜೆಪಿಗೆ ಬರುತ್ತಾರೆಯೇ ಎಂಬುದರ ಬಗ್ಗೆ ಗೊತ್ತಿಲ್ಲ. ಬರುವುದಾದರೆ
ಈ ಕುರಿತು ಪಕ್ಷ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದರು.
Advertisement
ಎಸ್.ಎಂ.ಕೃಷ್ಣ ಅವರು ಬಿಜೆಪಿಗೆ ಬರಲು ಒಪ್ಪಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ, ಯಡಿಯೂರಪ್ಪಅವರು ಹೇಳಿದ್ದಾರೆ ಎಂದ ಮೇಲೆ ನಾನೇನು ಹೇಳುವುದು? ಅವರೇ ಮಾತುಕತೆ ನಡೆಸುತ್ತಾರೆ ಮತ್ತು ಸೂಕ್ತ ನಿರ್ಧಾರ
ತೆಗೆದುಕೊಳ್ಳುತ್ತಾರೆ. ಇದು ಪಕ್ಷಕ್ಕೆ ಸಂಬಂಧಿಸಿದ ವಿಚಾರವಾಗಿದ್ದರಿಂದ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು
ತಿಳಿಸಿದರು.