Advertisement

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

11:44 PM Oct 22, 2024 | Team Udayavani |

ಮಂಡ್ಯ: ಕಾಂಗ್ರೆಸ್‌ನವರು ನನ್ನನ್ನು ಪಾತಾಳಕ್ಕೆ ತಳ್ಳಿದರು ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾಂಗ್ರೆಸ್‌ ಸರಕಾರವನ್ನು ಕಿತ್ತು ಹಾಕುತ್ತೇವೆ, ಮುಂದೆ ತಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೊರಟಿರುವವರು ಹೇಗೆ ಪಾತಾಳಕ್ಕೆ ಹೋಗಲು ಸಾಧ್ಯ? ಎಂದು ವಾಗ್ಧಾಳಿ ನಡೆಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಅವರು ಎಲ್ಲಿಗಾದರೂ ಹೋಗಲಿ, ಆದರೆ ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಇದರ ಬಗ್ಗೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಕೇಂದ್ರಕ್ಕೆ ಕರ್ನಾಟಕ ತೆರಿಗೆ ಕೊಡುವುದರಲ್ಲಿ ಎರಡನೇ ಸ್ಥಾನದಲ್ಲಿದೆ. 6 ಸಾವಿರ ಕೋಟಿ ತೆರಿಗೆ ಕೊಟ್ಟ ರಾಜ್ಯಗಳಿಗೆ 30 ಸಾವಿರ ಕೋಟಿ ರೂ. ಅನುದಾನ ಕೊಡುತ್ತಾರೆ. 30 ಸಾವಿರ ಕೋಟಿ ತೆರಿಗೆ ಕೊಡುವ ರಾಜ್ಯಕ್ಕೆ 6 ಸಾವಿರ ಕೋಟಿ ರೂ. ಅನುದಾನ ನೀಡುತ್ತಾರೆ. ಮುಖ್ಯಮಂತ್ರಿ ಆಗುವವರು ಕರ್ನಾಟಕಕ್ಕೆ ಮೊದಲು ನ್ಯಾಯ ಕೊಡಿಸಲಿ ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next