Advertisement

ಉಪ ಚುನಾವಣೆ ಧರ್ಮ ಯುದ್ದ: ಮಾಜಿ ಸಚಿವ ಕೃಷ್ಣಬೈರೇಗೌಡ

09:19 AM Nov 19, 2019 | keerthan |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಧರ್ಮ ಯುದ್ದವಾಗಿದ್ದು ಧರ್ಮ ಹಾಗೂ ಅಧರ್ಮ ನಡುವೆ ನಡೆಯುತ್ತಿರುವ ಚುನಾವಣೆಯಲ್ಲಿ ಅಸತ್ಯ- ಅಧರ್ಮವನ್ನು ಅನುಸರಿಸಿದ ಅನರ್ಹ ಶಾಸಕರಿಗೆ ಪಾಠ ಕಲಿಸಬೇಕೆಂದು ಮಾಜಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

Advertisement

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂದಿ ಅಂಜಿನಪ್ಪ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.

ಕಾಂಗ್ರೆಸ್ ನಿಂದ ಎಲ್ಲ ಅಧಿಕಾರ ಪಡೆದು ಹಣ, ಅಧಿಕಾರ ದಾಹದಿಂದ ಕೋಮುವಾದಿ ಬಿಜೆಪಿಗೆ ಸೇರಿದ್ದಾರೆಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲದ ಮೂಲಕ ಆನೈತಿಕ ರಾಜಕಾರಣಕ್ಕೆ ಮುಂದಾಗಿದೆಯೆಂದರು. ಬಿಜೆಪಿ ನಾಯಕರಿಗೆ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮೇಲೆ ನಂಬಿಕೆ ಇಲ್ಲ ಆದ್ದರಿಂದ ವಮಾಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಜನ ಸ್ವಾಭಿಮಾನಿಗಳಾಗಿದ್ದು ಬಿಜೆಪಿಗೆ ಮಾರಾಟವಾಗಿರುವ ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಕ್ಕಪಾಠ ಕಲಿಸಬೇಕೆಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶಿವಶಂಕರರೆಡ್ಡಿ, ಶಾಸಕ ವಿ.ಮುನಿಯಪ್ಪ, ಅಭ್ಯರ್ಥಿ ನಂದಿ ಅಂಜಿನಪ್ಪ, ಜಿ.ಎಚ್.ನಾಗರಾಜ್, ರಮೇಶ್‌, ನವೀನ್ ಕುಮಾರ್ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next