Advertisement

ಸೆ.20 ರಂದು ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ರೈತ ಸಂಘ ಮುತ್ತಿಗೆ

05:42 PM Sep 18, 2021 | Team Udayavani |

ಬೈಲಹೊಂಗಲ:  ಇದೆ ತಿಂಗಳು 20 ರಂದು ಅಥಣಿಯಲ್ಲಿನ  ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲು ರಾಜ್ಯ ರೈತ ಸಂಘ ನಿರ್ಧರಿಸಿದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ತಿಳಿಸಿದರು.

Advertisement

ತಾಲೂಕಿನ ನಯಾ ನಗರ ಗ್ರಾಮದ ಸಮೀಪದ ಮಲಪ್ರಭಾ ನದಿಯ ದಡದಲ್ಲಿನ ಕಬ್ಬಿನ ಗದ್ದೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಪ್ಟೆಂಬರ್ 20 ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಶಶಿಕಾಂತ್ ಪಡಸಲಗಿ ನೇತೃತ್ವದಲ್ಲಿ ಅಥಣಿಯ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲು ರೈತ ಸಂಘ ನಿರ್ಧರಿಸಿದೆ. ಅಥಣಿ ಭಾಗದ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬೆಳಗಾವಿ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರೇಶ್ ಮಂಡೆದ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಈಶ್ವರ್ ಶಿಲ್ಲೇದಾರ, ಬೈಲಹೊಂಗಲ ತಾಲೂಕು ಅಧ್ಯಕ್ಷ ಮಹಾಂತೇಶ್ ಹಿರೇಮಠ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next