Advertisement

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

12:31 PM Jul 27, 2024 | Team Udayavani |

ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಿನ ವಿವಿಧ ಜಲಾಶಯಗಳಿಂದ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಸಮೀಪದ ಕೃಷ್ಣಾ ನದಿಯಲ್ಲಿ ದಿನದಿಂದ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಶನಿವಾರ ಹಿಪ್ಪರಗಿ ಜಲಾಶಯಕ್ಕೆ 2,28,056 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

Advertisement

ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುರಿಂದ ಅವಳಿ ರಬಕವಿ-ಬನಹಟ್ಟಿ ನಗರಗಳಿಗೆ ನೀರು ಪೂರೈಸುವ ಜಾಕವೆಲ್‌ಗಳಿಗೆ ಹೋಗುವ ಮಾರ್ಗ ಬಂದಾಗಿದೆ. ಸದ್ಯ ಜಾಕವೆಲ್‌ಗಳು ಸಂಪೂರ್ಣವಾಗಿ ನಡುಗಡ್ಡೆಗಳಾಗಿವೆ.

ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಕೃಷ್ಣಾ ನದಿಯ ತನ್ನ ಒಡಲು ಬಿಟ್ಟು ಹೊರಗೆ ಹರಿಯುತ್ತಿದ್ದಾಳೆ. ಇದರಿಂದಾಗಿ ನದಿ ತೀರದ ಹಲವಾರು ಎಕರೆಯಷ್ಟು ಭೂ ಪ್ರದೇಶದಲ್ಲಿ ಬೆಳೆದ ಬೆಳೆಗಳು ನೀರಿನಲ್ಲಿ ನಿಂತಿವೆ. ಹಿಪ್ಪರಗಿ ಜಲಾಶಯದ ಹಿನ್ನೀರು ಕ್ರಮೇಣವಾಗಿ ಹೆಚ್ಚಾಗುತ್ತಿದೆ. ಇದರಿಂದಾಗಿ ನದಿ ತೀರದ ಹಲವಾರು ಎಕರೆಯಷ್ಟು ಭೂ ಪ್ರದೇಶದಲ್ಲಿ ಬೆಳೆದ ಬೆಳೆಗಳು ನೀರಿನಲ್ಲಿ ನಿಂತಿವೆ. ಹಿಪ್ಪರಗಿ ಜಲಾಶಯದ ಹಿನ್ನೀರು ಕ್ರಮೇಣವಾಗಿ ಹೆಚ್ಚಾಗುತ್ತಿದ್ದು, ಇದ್ದರಿಂದ ಜಾನುವಾರುಗಳನ್ನು ನದಿ ನೀರಿಗೆ ಇಳಿಸಬಾರದು ಎಂದು ತಾಲೂಕು ಆಡಳಿತ ಮುನ್ನಚ್ಚರಿಗೆ ನೀಡಿದೆ.

ಶನಿವಾರ ಮುಂಜಾನೆ 7 ಗಂಟೆಗೆ ದಾಖಲಾದಂತೆ ಹಿಪ್ಪರಗಿ ಜಲಾಶಯಕ್ಕೆ ಒಟ್ಟು 2,28,056 ಕೂಸೆಕ್ಸ್ ನೀರು ಹರಿದು ಬರುತ್ತಿದೆ. ಇಂದಿನ ನೀರಿನ ಮಟ್ಟ 524.75 ಮೀಟರ್ ಇದ್ದು, ಜಲಾಶಯದ ಹೊರಹರಿವು 2,28,056 ಕ್ಯೂಸೆಕ್ಸ್ ನಷ್ಟಿದೆ. ಮಹಾರಾಷ್ಟçದ ಕೊಯ್ನಾ 93 ಮಿ. ಮೀ, ನವಜಾ 105 ಮಿ.ಮೀ., ಮಹಾಬಲೇಶ್ವರ 182 ಮಿ. ಮೀ, ತರಾಳಿ 162 ಮಿ. ಮೀ, ವಾರಣಾ 73 ಮಿ.ಮೀ., ರಾಧಾನಗರಿ 180 ಮಿ. ಮೀ, ದೂಧಗಂಗಾ 150 ಮಿ. ಮೀ ನಷ್ಟು ಮಳೆಯಾದ ವರದಿಯಾಗಿದೆ. ಮಹಾರಾಷ್ಟçದಲ್ಲಿ ಉತ್ತಮ ಮಳೆಯಾಗುತ್ತಿದ್ದು ಇದರಿಂದ ಮುಂದಿನ ದಿನಗಳಲ್ಲಿ ನದಿಗೆ ಇನ್ನೂ ಹೆಚ್ಚಿನ ನೀರು ಹರಿದು ಬರುವ ಸಾಧ್ಯತೆ ಇರುವುದರಿಂದ ನದಿ ತೀರದ ಗ್ರಾಮಗಳಲ್ಲಿ ಮುನ್ನೆಚ್ಚಿಕೆಯ ಕ್ರಮವಾಗಿ ಡಂಗುರ ಸಾರಿ ಜನರು ನದಿ ತೀರಕ್ಕೆ ಸ್ನಾನಕ್ಕೆ, ಬಟ್ಟೆ ತೊಳೆಯಲಿಕ್ಕೆ, ದನ ಕರುಗಳನ್ನು ತೆಗೆದುಕೊಂಡು ಹೋಗಬಾರದು ಎಂದು ಎಚ್ಚರಿಕೆಯನ್ನು ನೀಡಲಾಗಿದೆ ಎಂದು ರಬಕವಿ-ಬನಹಟ್ಟಿ  ತಹಸೀಲ್ದಾರ ಗಿರೀಶ ಸ್ವಾದಿ ತಿಳಿಸಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next