Advertisement

Krishna: ಕೃಷ್ಣಾ ನೀರು ಹಂಚಿಕೆ: ತೆಲಂಗಾಣ ಆಂಧ್ರಕ್ಕೆ ಹೊಸ ನಿಯಮ

01:00 AM Oct 05, 2023 | Team Udayavani |

ಹೊಸದಿಲ್ಲಿ: ಕೃಷ್ಣಾ ನದಿ ನೀರನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಹಂಚುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷ್ಣಾ ನೀರು ವ್ಯಾಜ್ಯ ನ್ಯಾಯಮಂಡಳಿಗೆ ಹೊಸ ನಿಯಮ ರೂಪಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೊಸದಿಲ್ಲಿ ಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

Advertisement

ಹೊಸ ನಿಯಮಗಳ ಅನ್ವಯ ಮುಂದಿನ ವರ್ಷಗಳಲ್ಲಿ ಎರಡೂ ರಾಜ್ಯಗಳ ನಡುವೆ ನೀರು ಹಂಚಿಕೆ ನಡೆಸಲಾಗುತ್ತದೆ ಎಂದು ಠಾಕೂರ್‌ ಹೇಳಿದ್ದಾರೆ. ಕೇಂದ್ರ ಸರಕಾರದ ತೀರ್ಮಾನದಿಂದಾಗಿ ತೆಲಂಗಾಣದಲ್ಲಿ ಇರುವ 50 ಲಕ್ಷ ಮಂದಿ ರೈತರಿಗೆ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ

ಜಿ.ಕಿಶನ್‌ ರೆಡ್ಡಿ ಹೇಳಿದ್ದಾರೆ. ನೀರು ಹಂಚಿಕೆ ವಿಚಾರವಾಗಿ ತೆಲಂಗಾಣ ಸರಕಾರ 2015ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದೆ. ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರದ ತೀರ್ಮಾನ ಮಹತ್ವದ್ದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next