Advertisement

ಕೃಷ್ಣಗಿರಿ: ವಿಕೆ ಶಶಿಕಲಾ ಇಬ್ಬರು ಬೆಂಬಲಿಗರ ಕಾರು ಬೆಂಕಿಗಾಹುತಿ: ಏನಿದು ಘಟನೆ

12:33 PM Feb 08, 2021 | Team Udayavani |

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ.ಶಶಿಕಲಾ ಸೋಮವಾರ (ಫೆ.08) ತಮಿಳುನಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಬಲಿಗರ ಎರಡು ಕಾರುಗಳು ಆಕಸ್ಮಿಕವಾಗಿ ಬೆಂಕಿ ಹಿಡಿದು ಸುಟ್ಟು ಹೋದ ಘಟನೆ ಕೃಷ್ಣಗಿರಿ ಟೋಲ್ ಗೇಟ್ ಸಮೀಪ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಏನಿದು FDI ಸಂಚು, ಆಂದೋಲನ್ ಜೀವಿ ಬಗ್ಗೆ ಎಚ್ಚರಿಕೆ ಇರಲಿ; ಪ್ರಧಾನಿ ಮೋದಿ ವ್ಯಾಖ್ಯಾನ

ಕರ್ನಾಟಕದ ಗಡಿ ದಾಳಿ ಶಶಿಕಲಾ ತಮಿಳುನಾಡಿನತ್ತ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಇಬ್ಬರು ಬೆಂಬಲಿಗರ ಕಾರಿನಲ್ಲಿ ತುಂಬಿದ್ದ ಪಟಾಕಿ ಸಿಡಿದು ಬೆಂಕಿಹೊತ್ತಿಕೊಂಡ ಪರಿಣಾಮ ಕಾರು ಬೆಂಕಿಗಾಹುತಿಯಾಗಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ಘಟನೆ ವಿಷಯ ತಿಳಿದು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವರದಿ ಹೇಳಿದೆ. ಏತನ್ಮಧ್ಯೆ ವಿಕೆ ಶಶಿಕಲಾ ಹೊಸೂರಿನಲ್ಲಿರುವ ಮಾರಿಯಮ್ಮ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next