Advertisement

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

09:10 PM Jan 16, 2022 | Team Udayavani |

ಉಡುಪಿ: ಶ್ರೀಕೃಷ್ಣ ಸನ್ನಿಧಿಗೆ ಭಕ್ತರು ಸಲ್ಲಿಸುವ ಹೊರೆಕಾಣಿಕೆಯನ್ನು ಶೇಖರಿಸುವ ಉಗ್ರಾಣ “ಸುಧಾಮ’ವನ್ನು ಭಾವೀ ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ವೀಕ್ಷಿಸಿದರು.

Advertisement

ಹೊರೆಕಾಣಿಕೆ ಕಾರ್ಯಾಲಯವನ್ನು ನಿರ್ವಹಿಸುತ್ತಿರುವ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ನ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪರಿಷತ್‌ನ ಅಧ್ಯಕ್ಷ ಚೈತನ್ಯ ಎಂ.ಜಿ., ಹೊರಕಾಣಿಕೆ ಸಮಿತಿ ಸಂಚಾಲಕ ಸುಪ್ರಸಾದ್‌ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿವಿಧೆಡೆ ಹೊರೆ ಕಾಣಿಕೆ ಸಮರ್ಪಣೆ
ಉಡುಪಿ: ಕೃಷ್ಣಾಪುರ ಪರ್ಯಾಯೋತ್ಸವಕ್ಕೆ ರಾಯಚೂರಿನ ಕೃಷ್ಣಭಕ್ತರಿಂದ 220 ಕ್ವಿಂ. ಅಕ್ಕಿ ಮತ್ತು ಬೆಲ್ಲವನ್ನು ಪರ್ಯಾಯ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಶ್ರೀ ಈಶಪ್ರಿಯತೀರ್ಥ ಶ್ರೀಗಳ ಮುಖಾಂತರ ಭಾವೀ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಪರ್ಯಾಯ ಕಾಣಿಕೆಯಾಗಿ ಅರ್ಪಿಸಿದರು. ಪರ್ಯಾಯೋತ್ಸವ ಸಮಿತಿ ಅಧ್ಯಕ್ಷ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಸಮಿತಿ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್‌ ಪಾಡಿಗಾರು, ಜತೆ ಕಾರ್ಯದರ್ಶಿ ರಾಜಗೋಪಾಲ ಭಟ್‌, ಪ್ರವೀಣ್‌ ಉಪಾಧ್ಯಾಯ, ಹೊರೆಕಾಣಿಕೆ ಸಮಿತಿ ಸಂಚಾಲಕ ಸುಪ್ರಸಾದ್‌ ಶೆಟ್ಟಿ ಉಪಸ್ಥಿತರಿದ್ದರು.

ಇಂದು ಹೊರೆಕಾಣಿಕೆ ಸಮರ್ಪಣೆ
 ಕನ್ನರ್ಪಾಡಿಯ ಶ್ರೀ ಜಯದುರ್ಗಾಪರಮೇಶ್ವರೀ ದೇಗುಲ
ಉಡುಪಿ: ಇತಿಹಾಸ ಪ್ರಸಿದ್ಧ ಕನ್ನರ್ಪಾಡಿಯ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ.17ರಂದು 4 ಗಂಟೆಗೆ ಉಡುಪಿ ಶ್ರೀ ಕೃಷ್ಣಾಪುರ ಮಠ ಪರ್ಯಾಯ ಮಹೋತ್ಸವಕ್ಕೆ ಹಸುರು ಹೊರೆಕಾಣಿಕೆಯನ್ನು ನಿಡಂಬೂರು ಮಾಗಣೆ ಮತ್ತು ಊರ ಪರವೂರ ಭಕ್ತರು ಮೆರವಣಿಗೆಯ ಮೂಲಕ ಸಮರ್ಪಿಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿಯಾದ ತಹಶೀಲ್ದಾರ್‌ ಅವರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next