Advertisement

ಕೆರೆಗೆ ಈಜಾಡಲು ತೆರಳಿದ ಕೃಷ್ಣಾಪುರದ ಯುವಕ ನೀರಲ್ಲಿ ಮುಳುಗಿ ಸಾವು

05:27 PM Jun 13, 2020 | keerthan |

ಸುರತ್ಕಲ್: ಕೆರೆಯಲ್ಲಿ ಈಜಲು ತೆರಳಿದ್ದ ಸ್ಥಳೀಯ ಯುವಕನೋರ್ವ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೃಷ್ಣಾಪುರ ನೈತಂಗಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

Advertisement

ಮೃತ ಯುವಕನನ್ನು ಸ್ಥಳೀಯ ನಿವಾಸಿ ತಾರನಾಥ್ ಎಂಬವರ ಪುತ್ರ ಸಂತೋಷ್ ದೇವಾಡಿಗ (22) ಎಂದು ಗುರುತಿಸಲಾಗಿದೆ.

ಸಂತೋಷ್ ತನ್ನ ನಾಲ್ಕು ಗೆಳೆಯರ ಜೊತೆ ಶನಿವಾರ ಮಧ್ಯಾಹ್ನ ಕೃಷ್ಣಾಪುರ ಬಳಿಯ ಕೆರೆಯಲ್ಲಿ ಈಜಲು ತೆರಳಿದ್ದರು. ಕೆರೆಯ ಕಲ್ಲಿನ ಪಕ್ಕದಲ್ಲೇ ಈಜಾಡುತ್ತಿದ್ದ ವೇಳೆ ಕಾಲುಜಾರಿ ನೀರಿನಾಳಕ್ಕೆ ಬಿದ್ದು ಮೇಲೆಬರಲಾಗದೇ ಸ್ನೇಹಿತರ ಕಣ್ಣೆದುರೇ ಮುಳುಗಿದ್ದಾನೆ. ಸಂತೋಷ್ ಮುಳುಗುವುದನ್ನು ಕಂಡು ಸ್ನೇಹಿತರು ಬೊಬ್ಬೆ ಹೊಡೆದಿದ್ದು ಸ್ಥಳೀಯರು ಸ್ಥಳಕ್ಕಾಗಮಿಸಿ ರಕ್ಷಿಸಲು ಯತ್ನಿಸಿದರೂ ಬದುಕುಳಿಸಲಾಗಲಿಲ್ಲ.

ಈತ ಪ್ರಸ್ತುತ ಖಾಸಗಿ ಕಾಲೇಜಿನಲ್ಲಿ ತೃತೀಯ ವರ್ಷದ ಡಿಪ್ಲೋಮಾ ಪದವಿ ಓದುತ್ತಿದ್ದ.  ಮೃತ ಯುವಕನಿಗೆ ತಾಯಿ ಹಾಗೂ ಓರ್ವ ತಮ್ಮನಿದ್ದಾನೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಮೃತ ಶವವನ್ನು ಮಹಜರು ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next