Advertisement
ಹಿರಿಯ ರಾಜಕಾರಣಿಯಾಗಿರುವ ಎಸ್.ಎಂ.ಕೃಷ್ಣ ಪ್ರಭಲ ಒಕ್ಕಲಿಗ ಸಮುದಾಯದ ಮುಖಂಡರೂ ಆಗಿರುವುದರಿಂದ ಸಹಜವಾಗಿಯೇ ಈ ಸಮುದಾಯದ ರಾಜಕಾರಣಿಗಳಲ್ಲಿ ಆತಂಕ ಶುರುವಾಗಿದೆ.
ಆದರೆ, ಅವರು ಬಿಜೆಪಿ ಸೇರದಿದ್ದರೂ ಆ ಪಕ್ಷದ ಜತೆ ಪರೋಕ್ಷವಾಗಿ ಗುರುತಿಸಿಕೊಂಡರೆ ಆಗ ಹಳೆ ಮೈಸೂರು ಭಾಗದಲ್ಲಿ ಅಸ್ತಿತ್ವಕ್ಕಾಗಿ ಪರದಾಡುತ್ತಿರುವ ಬಿಜೆಪಿ ಸ್ವಲ್ಪ ಮಟ್ಟಿನ ಉಸಿರಾಟ ಮಾಡಲು ಅನುಕೂಲವಾಗಬಹುದು. ಆದರೆ, ಕೃಷ್ಣ ಒಬ್ಬರೇ ಹೋದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಅವರ ಜೊತೆಗೆ ಕಾಂಗ್ರೆಸ್ನಲ್ಲಿ ಅಸಮಾಧಾನಗೊಂಡಿರುವ ಚುನಾವಣೆಯಲ್ಲಿ ಸ್ಪರ್ಧಿಸುವ ಅಂಬರೀಶ್ ಅಂತವರೂ ಬಿಜೆಪಿ ಕಡೆಗೆ ಮುಖ ಮಾಡಿದರೆ ಅದು ಒಕ್ಕಲಿಗ ಸಮುದಾಯಕ್ಕೆ ಕಾಂಗ್ರೆಸ್ನಲ್ಲಿ ಅನ್ಯಾಯವಾಗುತ್ತಿದೆ ಎಂಬ ವಾತಾವರಣ ನಿರ್ಮಾಣವಾಗಲು ಕಾರಣವಾಗಬಹುದು. ಅದು ಬಿಜೆಪಿಗೆ ಲಾಭವಾಗಬಹುದು ಎನ್ನುವ ಲೆಕ್ಕಾಚಾರ ನಡೆಯುತ್ತಿದೆ.
Related Articles
Advertisement
ಇನ್ನು ಕೃಷ್ಣ ಬಿಜೆಪಿಗೆ ಬಂದರೂ ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮತಗಳ ಸಂಖ್ಯೆ ಹೆಚ್ಚಾಗಬಹುದೇ ಹೊರತು ಗೆಲ್ಲುವಷ್ಟು ಸುಧಾರಣೆ ಕಷ್ಟಸಾಧ್ಯ. ಆದರೆ, ಆ ಭಾಗದಲ್ಲಿ ಕಾಂಗ್ರೆಸ್ನ ಹಿಡಿತ ತಪ್ಪಿಸಲು ಅನುಕೂಲವಾಗುತ್ತದೆ. ಆದರೆ, ಬೆಂಗಳೂರು ಸುತ್ತಮುತ್ತ ಬಿಜೆಪಿಯ ಶಕ್ತಿ ಹೆಚ್ಚಬಹುದು ಎಂಬ ಲೆಕ್ಕಾಚಾರವೂ ಇದೆ. ಈ ಕಾರಣಕ್ಕಾಗಿಯೇ ಎಸ್.ಎಂ.ಕೃಷ್ಣ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಕೂಡಲೇ, ಅವರು ಬಿಜೆಪಿಗೆ ಬಂದರೆ ಸ್ವಾಗತ ಎಂದು ಬಿಜೆಪಿ ನಾಯಕರು ಹೇಳಲಾರಂಭಿಸಿದ್ದಾರೆ.
ಒಟ್ಟಿನಲ್ಲಿ ಕೃಷ್ಣ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಬಳಿಕ ರಾಜಕೀಯ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿದ್ದು, ಅವರು ತಮ್ಮ ಮುಂದಿನ ರಾಜಕೀಯ ನಡೆಯನ್ನು ತೀರ್ಮಾನಿಸುವವರೆಗೂ ಮುಂದುವರಿಯುವುದು ಖಚಿತ. ಆದರೆ, ಇದರ ಸತ್ಯಾಸತ್ಯತೆ ತಿಳಿಯಬೇಕಾದರೆ ಅವರು ತಮ್ಮ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸಬೇಕು.