Advertisement

ಸಿಂದಗಿ ಉಪಚುನಾವಣೆ: ಕೆ.ಆರ್.ಎಸ್. ಪಕ್ಷರಿಂದ ಮೊದಲ ನಾಮಪತ್ರ ಸಲ್ಲಿಕೆ

05:11 PM Oct 01, 2021 | keerthan |

ವಿಜಯಪುರ: ಜಿಲ್ಲೆಯ ಸಿಂದಗಿ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಶುಕ್ರವಾರ ಒಂದು ನಾಮ ಪತ್ರ ಸಲ್ಲಿಕೆಯಾಗಿದೆ.

Advertisement

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಡಾ.ಸುನೀಲ್ ಕುಮಾರ ಹಬ್ಬಿ ಎಂಬವರು ನಾಮಪತ್ರ ಸಲ್ಲಿಸಿದ ಮೊದಲ ಹುರಿಯಾಳು.

ಇದನ್ನೂ ಓದಿ:ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಿಂದ ತುಷ್ಟೀಕರಣ ರಾಜಕಾರಣ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಡಾ.ಹಬ್ಬಿ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಮೊದಲ ದಿನ ಡಾ.ಹಬ್ಬಿ ಅವರ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ.

ಅಕ್ಟೋಬರ್ 8 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next