Advertisement

ನಾಲೆಗಳಿಗೆ ಇಂದಿನಿಂದ ಕೆಆರ್‌ಎಸ್‌ ನೀರು ಬಿಡುಗಡೆ

11:50 PM Jul 15, 2019 | Lakshmi GovindaRaj |

ಮಂಡ್ಯ: ಬೆಳೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿಂದ ರೈತರು ನಡೆಸುತ್ತಿದ್ದ ಹೋರಾಟಕ್ಕೆ ಅಂತಿಮವಾಗಿ ಜಯ ಸಿಕ್ಕಿದೆ. ಮಂಗಳವಾರ (ಮೇ 16) ಮಧ್ಯರಾತ್ರಿಯಿಂದ ಕೆಆರ್‌ಎಸ್‌ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸಲು ಕಾವೇರಿ ನೀರು ಸಲಹಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ.

Advertisement

ಮಂಗಳವಾರ (ಜು.16)ರಿಂದ ಹತ್ತು ದಿನಗಳ ಕಾಲ ನಾಲೆಗಳಲ್ಲಿ ನೀರು ಹರಿಸಲು ಸಮಿತಿ ನಿರ್ಧಾರ ಕೈಗೊಂಡಿದ್ದು, ಆನಂತರ ಜಲಾಶಯದ ಒಳಹರಿವನ್ನು ಆಧರಿಸಿ ನೀರು ಹರಿಸಬೇಕೋ, ಬೇಡವೋ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ತಿಳಿಸಿದರು.

ಒಣಗುವ ಹಂತದಲ್ಲಿದ್ದ ಬೆಳೆಗಳನ್ನು ರಕ್ಷಣೆ ಮಾಡಲು ನೀರಿನ ಅಗತ್ಯ ವಿರುವ ಬಗ್ಗೆ ರಾಜ್ಯಸರ್ಕಾರ ಕೇಂದ್ರ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಈ ಹಿಂದೆಯೇ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿರುವ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವ ಜೊತೆಗೆ ಒಣಗುತ್ತಿರುವ ಬೆಳೆಗಳಿಗೂ ನೀರು ಹರಿಸಲು ಸಮ್ಮತಿ ಸೂಚಿಸಿದೆ ಎಂದು ಸಚಿವರು ಉದಯವಾಣಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next