Advertisement

ಪ್ರಗತಿಪರ ಕೃಷಿಕ ರಾಘವೇಂದ್ರ ನಾಯಕ್‌ ಕಲ್ಲೊಟ್ಟು ನಿಧನ

09:17 PM Mar 24, 2022 | Team Udayavani |

ಶಿರ್ವ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ,ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪಡೆದ ಪ್ರಗತಿಪರ ಕೃಷಿಕ,ಶಿರ್ವ ಕಲ್ಲೊಟ್ಟು ನಿವಾಸಿ ರಾಘವೇಂದ್ರ ನಾಯಕ್‌ (54) ಅವರು ಮಾ. 24ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

Advertisement

ಮೃತರು ತಾಯಿ,ಪತ್ನಿ,ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಪ್ರಗತಿಪರ ಕೃಷಿಕರಾಗಿ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಅವರು ಕೃಷಿ ಅನುವುಗಾರರಾಗಿ ಕಾಪು ತಾಲೂಕಿನಾದ್ಯಂತ ಕೃಷಿಕರಿಗೆ ಕೃಷಿ ಮಾಹಿತಿ/ತರಬೇತಿ ನೀಡುತ್ತಿದ್ದರು.ಕೃಷಿ ಕ್ಷೇತ್ರದ ಸಾಧನೆಗಾಗಿ ಅವರು 2016ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದು, 2017ರಲ್ಲಿ ಕೃಷಿ ಇಲಾಖೆಯ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಯನ್ನೂ ಪಡೆದಿದ್ದರು. ಕೃಷಿಯಲ್ಲಿನ ಅವರ ಸಾಧನೆಗಾಗಿ ಅನೇಕ ಸಂಘ ಸಂಸ್ಥೆಗಳು ಅವರನ್ನು ಗೌರವಿಸಿವೆ. ಉಡುಪಿ ಜಿಲ್ಲಾ ಕೃಷಿಕ ಸಂಘ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next