Advertisement

ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರೋ ಗೊತ್ತಿಲ್ಲ, ಭವಿಷ್ಯ ಮಾತ್ರ ಸುಳ್ಳಾಗುತ್ತಿದೆ;ಈಶ್ವರಪ್ಪ

04:59 PM Jan 17, 2021 | Team Udayavani |

ಮೈಸೂರು : ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಸಿದ್ದರಾಮಯ್ಯನವರು ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ ಅದ್ಯಾವಾಗ ಸಿದ್ದರಾಮಯ್ಯನವರು ಜ್ಯೋತಿಷ್ಯರಾಗಿದ್ದಾರೆ ಗೊತ್ತಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

Advertisement

ಏಪ್ರಿಲ್ ನಂತರ ಸಿಎಂ ಬದಲಾವಣೆ ಆಗುತ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಕೆ ಎಸ್​ ಈಶ್ವರಪ್ಪ ಚಾಮುಂಡಿ ಬೆಟ್ಟದಲ್ಲಿ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರೋ ಗೊತ್ತಿಲ್ಲ. ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ. ಈಗ ಏಪ್ರಿಲ್ ಎಂದು ಹೇಳುತ್ತಿದ್ದಾರೆ, ಅದು ಯಾವುದೂ ನಿಜ ಆಗಲ್ಲ, ಅವರ ಭವಿಷ್ಯ ಪ್ರತಿ ಬಾರಿಯೂ ಸುಳ್ಳಾಗುತ್ತದೆ. ಈಗ ಏಪ್ರಿಲ್, ಮೇ, ಜೂನ್ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನು, ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ಕುರುಬ ಸಮುದಾಯವನ್ನು ಎಸ್​​ಟಿಗೆ ಸೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ. ಕಾಗಿನೆಲೆ ಸ್ವಾಮೀಜಿ ಸಮ್ಮುಖದಲ್ಲಿ ಸಮಾವೇಶ ನಡೆಯಲಿದೆ ಎಂದರು.
ಶೀಘ್ರವೇ, ನೂತನ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆ ಆದ ಸದಸ್ಯರಿಗೆ ತರಬೇತಿ ನೀಡಲಾಗುವುದು ಎಂದರು.

ಇದನ್ನೂ ಓದಿ:ದಿ.ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Advertisement

Udayavani is now on Telegram. Click here to join our channel and stay updated with the latest news.

Next