Advertisement

ಮುಸ್ಲಿಮರು ಕಸ ಗುಡಿಸಿದ್ರೆ BJP ಟಿಕೆಟ್ ಕೊಡ್ತೇವೆ: ಕೆಎಸ್ ಈಶ್ವರಪ್ಪ 

05:57 PM Mar 28, 2017 | Sharanya Alva |

ಬೆಂಗಳೂರು: ಮುಸ್ಲಿಮರು ನಮ್ಮ ಪಕ್ಷದ ಕಚೇರಿಯಲ್ಲಿ ಕಸ ಗುಡಿಸಿದ್ರೆ ಟಿಕೆಟ್ ಕೊಡ್ತೇವೆ..ಇದು ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಹರ್ಷದ್ ರಿಜ್ವಾನ್ ಅವರು ಮುಸ್ಲಿಮರಿಗೆ ನಿಮ್ಮ ಪಕ್ಷದಲ್ಲಿ ಎಷ್ಟು ಟಿಕೆಟ್ ಕೊಟ್ಟಿದ್ದೀರಿ ಎಂಬ ಪ್ರಶ್ನೆಗೆ ವಿರೋಧ ಪಕ್ಷದ ನಾಯಕ ಕೆಎಸ್ ಈಶ್ವರಪ್ಪ ಕೊಟ್ಟ ಉತ್ತರ ಇದು!

Advertisement

ನಮ್ಮ ಪಕ್ಷದ ಕಚೇರಿಯಲ್ಲಿ ಕಸ ಗುಡಿಸಿದ್ರೆ ಟಿಕೆಟ್ ಕೊಡುತ್ತೇವೆ ಎಂದು ಕೆಎಸ್ ಈಶ್ವರಪ್ಪ ಹೇಳಿದಾಗ, ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆಗ ಅಲ್ಪಸಂಖ್ಯಾತರಾದ ಡಾ.ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದು ಯಾರು, ಜಾರ್ಜ್ ಫೆರ್ನಾಂಡಿಸ್ ರನ್ನು ಮಂತ್ರಿ ಮಾಡಿದ್ದು ಯಾರು ಎಂದು ಪ್ರಶ್ನಿಸುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಬಿಜೆಪಿಯವರು ಮೊದಲಿನಿಂದಲೂ ಅಲ್ಪಸಂಖ್ಯಾತ ವಿರೋಧಿಗಳು ಎಂದು ಸಿಎಂ ಆರೋಪಿಸಿ, ಈಶ್ವರಪ್ಪ ಈ ರೀತಿ ಹೇಳಿಕೆ ನೀಡಬಾರದಿತ್ತು. ಈ ಪದವನ್ನು ಕಡತದಿಂದ ತೆಗೆದು ಹಾಕಿ ಎಂದಾಗ, ಕಸ ಗುಡಿಸುವುದು ಅಂದ್ರೆ ಪಕ್ಷಕ್ಕಾಗಿ ದುಡಿಯುವುದು, ಪೋಸ್ಟರ್ ಅಂಟಿಸುವುದು ಅಂತ ಅರ್ಥ ಎಂದು ಈಶ್ವರಪ್ಪ ಸಮಜಾಯಿಷಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next