Advertisement

KS ಈಶ್ವರಪ್ಪಗೆ ಕೊನೆವರೆಗೂ ಹೋರಾಡುವ ಗಂಡೆದೆಯೇ ಇಲ್ಲ: ಆಯನೂರು

06:31 PM Mar 22, 2024 | Team Udayavani |

ಶಿವಮೊಗ್ಗ:ನನಗೆ ಈಗಲೂ ಈಶ್ವರಪ್ಪ ಪಕ್ಷೇತರ ಸ್ಪರ್ಧೆ ಮಾಡುವ ವಿಶ್ವಾಸ ಇಲ್ಲ. ಅವರು ಯಾವಾಗಲೂ ಕೊನೆಯವರೆಗೆ ಹೋರಾಟ ಮಾಡಲ್ಲ. ಅಂಥಹ ಗಂಡೆದೆ ಅವರಿಗೆ ಇಲ್ಲ ಎಂದು ನೈಋತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆಯನೂರು ಮಂಜುನಾಥ್‌ ಟೀಕಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ವೇಳೆ ಈಶ್ವರಪ್ಪ ಸ್ಪರ್ಧಿಸಿದರೆ ನನ್ನ ಮತ ಅವರಿಗೇ ಹಾಕುತ್ತೇನೆ. ಈಶ್ವರಪ್ಪ ಹಾಗೂ ರಾಘವೇಂದ್ರ ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಅದು ಸಾಧ್ಯವಿಲ್ಲ. ಇಬ್ಬರ ನಡುವೆ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುತ್ತಾರೆ. ಈಶ್ವರಪ್ಪ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದಾರೆ.

ಆದರೆ ಅವರೇ ಮಗನಿಗೆ ಟಿಕೆಟ್‌ ಸಿಗಲಿಲ್ಲ ಅಂತ ಸ್ಪರ್ಧೆ ಮಾಡುತ್ತಿದ್ದಾರೆ. ಕುಟುಂಬದ ವಿಚಾರ ಬಿಟ್ಟು ಧ್ವನಿ ಎತ್ತಿದ್ದರೆ ಅವರಿಗೆ ಗೌರವ ಇರುತ್ತಿತ್ತು. ಬಿಜೆಪಿ ಒಡೆದ ಮನೆಯಲ್ಲ. ಚೂರು ಚೂರಾದ ಮನೆಯಾಗಿದೆ. ನಾನು ಪಕ್ಷ ಬಿಟ್ಟಾಗ ಯಾರೂ ಮಾತನಾಡಲಿಲ್ಲ. ಈಗ ಅವರ ಬುಡಕ್ಕೆ ಬಂದಾಗ ಎಲ್ಲರೂ ಮಾತನಾಡುತ್ತಿದ್ದಾರೆ. ಪಕ್ಷ ಶುದ್ಧೀಕರಣ ಮಾಡಬೇಕು ಅಂತಿದ್ದಾರೆ. ನನಗೂ ಕೂಡ ಸಾಕಷ್ಟು ನೋವಿತ್ತು. ನಾನು ಸಹ ನೋವಿನಿಂದಲೇ ಪಕ್ಷದಿಂದ ಹೊರ ಬಂದಿದ್ದೇನೆ. ಈ ಬಾರಿ ಮೋದಿ ಯಾವುದೇ ಅಲೆ ಕಾಣುತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next